ಓದುಗರ ಪತ್ರ
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು ಮೀಸಲಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಶಾಸನಸಭೆಗಳ ಕಾರ್ಯ ವೈಖರಿ ಜನರ ನಿರೀಕ್ಷೆಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿ ಸಾಗುತ್ತಿರುವುದು ಬೇಸರದ ಸಂಗತಿಯಾಗಿದೆ.
ಎಲ್ಲ ರಾಜಕೀಯ ಪಕ್ಷಗಳ ಸದಸ್ಯರು ಅಭಿವೃದ್ಧಿ, ಆಡಳಿತ, ಉದ್ಯೋಗ, ಆರೋಗ್ಯ, ಶಿಕ್ಷಣ, ರೈತರ ಸಮಸ್ಯೆಗಳು, ಬಡತನ ನಿವಾರಣೆ ಮುಂತಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಬೇಕಾದ ಸಮಯದಲ್ಲಿ, ವೈಯಕ್ತಿಕ ವ್ಯಕ್ತಿಗಳ ವಿರುದ್ಧದ ಆರೋಪಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಭ್ರಷ್ಟಾಚಾರ ಆರೋಪಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸದನಗಳು ಜನಸೇವೆಯ ಕೇಂದ್ರಗಳಾಗುವ ಬದಲು ಆರೋಪ- ಪ್ರತ್ಯಾರೋಪಗಳ ವೇದಿಕೆಯಾಗಿವೆ. ಭ್ರಷ್ಟಾಚಾರ ಕುರಿತ ಚರ್ಚೆಗಳು ಅಗತ್ಯವಾದರೂ ಅದಕ್ಕೆ ಪ್ರಾಮುಖ್ಯತೆ ನೀಡಿ ಸದನದ ಸಮಯವನ್ನು ವ್ಯರ್ಥ ಮಾಡುವುದು, ಸದನವನ್ನು ಬಹಿಷ್ಕಾರ ಮಾಡುವುದು ಅಥವಾ ಮುಂದೂಡುತ್ತಲೇ ಇದ್ದರೆ ಜನತೆಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ವೈಯಕ್ತಿಕ ದ್ವೇಷ, ರಾಜಕೀಯ ಪ್ರತಿಷ್ಠೆ, ಅಸಭ್ಯ ವರ್ತನೆ, ಹಾಗೂ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡುವುದರಿಂದ ಶಾಸನಸಭೆಗಳ ಗೌರವ ಮತ್ತು ಪ್ರಾಮುಖ್ಯತೆ ಕುಸಿಯುತ್ತಿದ್ದು, ಸಾರ್ವಜನಿಕ ಹಣ ಹಾಗೂ ಅಮೂಲ್ಯವಾದ ಸಮಯ ವ್ಯರ್ಥವಾಗುತ್ತಿದೆ. ಎಲ್ಲಾ ಜನಪ್ರತಿನಿಽಗಳು ತಮ್ಮ ಜವಾಬ್ದಾರಿಯನ್ನು ಅರಿತು, ಸದನದ ಗೌರವವನ್ನು ಕಾಪಾಡುವುದು ಅಗತ್ಯ.
– ವಿನೋದ್ ಶಂಕರ್, ಮೈಸೂರು
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…