ಓದುಗರ ಪತ್ರ
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ ಆನ್ ಲೈನ್ ಪ್ಲಾಟ್ ಫಾರ್ಮ್ ಮೂಲಕ ತಮ್ಮ ಸ್ಥಿರಾಸ್ತಿ, ಚರಾಸ್ತಿಗಳನ್ನು ಕಡ್ಡಾಯವಾಗಿ ಘೋಷಿಸುವಂತೆ ನಿರ್ದೇಶಿಸಿದೆ. ತಮ್ಮ ಆಸ್ತಿಯ ವಿವರವನ್ನು ಘೋಷಿಸದ ನೌಕರರರು ಹಾಗೂ ಅಧಿಕಾರಿಗಳ ೨ ತಿಂಗಳ ಸಂಬಳವನ್ನೂ ತಡೆಹಿಡಿಯುವ ಮೂಲಕ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.
ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಪಾರದರ್ಶಕ ಆಡಳಿತವನ್ನು ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಘೋಷಿಸುವ ನಿಟ್ಟಿನಲ್ಲಿ ಕಾನೂನನ್ನು ಜಾರಿಗೊಳಿಸುವುದು ಅಗತ್ಯವಾಗಿದೆ.
-ಹೆಚ್.ಕೆ.ಶಶಿಕುಮಾರ್, ಡಿ.ವಿ.ಸಿ.ಲೇಔಟ್, ರಾಮಕೃಷ್ಣನಗರ, ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…