ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂದು ವಿದ್ಯಾರ್ಥಿಗಳಿಗೆ ಮೊಬೈಲ್ ಕಲಿಕೆಯ ಒಂದು ಭಾಗವೇ ಆಗಿದೆ. ಮೊಬೈಲ್ ಬಳಕೆಯಿಂದಾಗಿ ಕೆಲವೊಂದು ಸಣ್ಣ- ಪುಟ್ಟ ಕಹಿ ಘಟನೆಗಳು ಘಟಿಸಿರಬಹುದು.
ಮೊಬೈಲ್ ಬಳಕೆಯ ಸಾಧಕ -ಬಾಧಕಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ತುರ್ತಾಗಿ ಆಗಬೇಕಾಗಿದೆ, ಇದರಲ್ಲಿ ಪೋಷಕರ ಜವಾಬ್ದಾರಿ ಹೆಚ್ಚಿನದು. ಶಿಕ್ಷಣ ಪಡೆಯುವ ದೃಷ್ಟಿಯಿಂದ ಮೊಬೈಲ್ -ನ್ ಬಳಕೆಯ ಬಗ್ಗೆ ಸರ್ಕಾರ ವಿದ್ಯಾರ್ಥಿಗಳಿಗೆ ತಜ್ಞರಿಂದ ಅರಿವು ಮೂಡಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ ಮೈಸೂರು





