Andolana originals

ಓದುಗರ ಪತ್ರ| ತಪ್ಪಿಲ್ಲ ಎಂದಾದರೆ ತನಿಖೆ ಎದುರಿಸಲಿ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡಿರುವುದಂತೂ ನಿಜ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಜವಾಬ್ದಾರಿಯುತವಾಗಿ ವರ್ತಿಸಬೇಕು.

ರಾಜ್ಯಪಾಲರು ತಾವು ಎಲ್ಲ ಆಯಾಮ ಗಳಲ್ಲಿಯೂ ಪರಿಶೀಲಿಸಿ ತನಿಖೆಗೆ ಆದೇಶಿಸಿರು ವುದಾಗಿ ತಿಳಿಸಿದ್ದಾರೆ. ನಾನು ಎಲ್ಲಿಯೂ ಪ್ರಭಾವ ಬೀರಿಲ್ಲ, ಅಲ್ಲದೆ ಮುಡಾ ನಿವೇಶನಗಳು ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರು ಮಾಡಿಸಿದ್ದಲ್ಲ, ಅವು ಬಿಜೆಪಿ ಅಧಿಕಾರಾವಧಿಯಲ್ಲಿ ಮಂಜೂರಾಗಿರುವುದು, ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಹೀಗಿದ್ದ ಮೇಲೆ ನಿಯಮ ಬಾಹಿರವಾಗಿ ಕೆಸರೆ ಬದಲಿಗೆ ವಿಜಯನಗರದಲ್ಲಿ ನಿವೇಶನ ಮಂಜೂರಾಗಿದ್ದು ಹೇಗೆ? ಇದರಲ್ಲಿ ಅವರ ಪ್ರಭಾವವಿದೆ ಎಂಬುದು ಸ್ಪಷ್ಟವಲ್ಲವೇ? ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಪ್ಪು ಮಾಡಿಲ್ಲ ಎನ್ನುವುದಾದರೆ ತನಿಖೆ ಎದುರಿಸಲಿ.

ಇದರ ನಡುವೆ ಕೆಲ ಕಾಂಗ್ರೆಸ್‌ನ ಜನಪ್ರತಿನಿಧಿಗಳು ಸಿದ್ದರಾಮಯ್ಯ ನವರ ವಿರುದ್ಧ ತನಿಖೆಗೆ ಆದೇಶಿಸಿದರೆ ಜನ ದಂಗೆ ಏಳುತ್ತಾರೆ, ರಕ್ತ ಕ್ರಾಂತಿ ಆಗುತ್ತದೆ, ಬಾಂಗ್ಲಾ ದೇಶದ ಪ್ರಧಾನಿ ದೇಶ ಬಿಟ್ಟ ಪರಿಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯ. ಕಾಂಗ್ರೆಸ್ ಪಕ್ಷ ಸಂವಿಧಾನಬದ್ಧವಾಗಿ ಆಡಳಿತ ನಡೆಸುತ್ತಿದೆ ಎಂಬ ವಿಶ್ವಾಸ ಜನರಲ್ಲಿ ಗಟ್ಟಿಗೊಳ್ಳಬೇಕಾದರೆ ಸಿದ್ದರಾಮಯ್ಯನವರು ಕಾನೂನು ಹೋರಾಟ ಮಾಡಲಿ.

-ಮುಳ್ಳೂರು ಪ್ರಕಾಶ್, ದಟ್ಟಗಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

1 min ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

29 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago