Andolana originals

ಓದುಗರ ಪತ್ರ| ತಪ್ಪಿಲ್ಲ ಎಂದಾದರೆ ತನಿಖೆ ಎದುರಿಸಲಿ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡಿರುವುದಂತೂ ನಿಜ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಜವಾಬ್ದಾರಿಯುತವಾಗಿ ವರ್ತಿಸಬೇಕು.

ರಾಜ್ಯಪಾಲರು ತಾವು ಎಲ್ಲ ಆಯಾಮ ಗಳಲ್ಲಿಯೂ ಪರಿಶೀಲಿಸಿ ತನಿಖೆಗೆ ಆದೇಶಿಸಿರು ವುದಾಗಿ ತಿಳಿಸಿದ್ದಾರೆ. ನಾನು ಎಲ್ಲಿಯೂ ಪ್ರಭಾವ ಬೀರಿಲ್ಲ, ಅಲ್ಲದೆ ಮುಡಾ ನಿವೇಶನಗಳು ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರು ಮಾಡಿಸಿದ್ದಲ್ಲ, ಅವು ಬಿಜೆಪಿ ಅಧಿಕಾರಾವಧಿಯಲ್ಲಿ ಮಂಜೂರಾಗಿರುವುದು, ಇದರಲ್ಲಿ ನನ್ನ ಪಾತ್ರವೇನೂ ಇಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಹೀಗಿದ್ದ ಮೇಲೆ ನಿಯಮ ಬಾಹಿರವಾಗಿ ಕೆಸರೆ ಬದಲಿಗೆ ವಿಜಯನಗರದಲ್ಲಿ ನಿವೇಶನ ಮಂಜೂರಾಗಿದ್ದು ಹೇಗೆ? ಇದರಲ್ಲಿ ಅವರ ಪ್ರಭಾವವಿದೆ ಎಂಬುದು ಸ್ಪಷ್ಟವಲ್ಲವೇ? ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಪ್ಪು ಮಾಡಿಲ್ಲ ಎನ್ನುವುದಾದರೆ ತನಿಖೆ ಎದುರಿಸಲಿ.

ಇದರ ನಡುವೆ ಕೆಲ ಕಾಂಗ್ರೆಸ್‌ನ ಜನಪ್ರತಿನಿಧಿಗಳು ಸಿದ್ದರಾಮಯ್ಯ ನವರ ವಿರುದ್ಧ ತನಿಖೆಗೆ ಆದೇಶಿಸಿದರೆ ಜನ ದಂಗೆ ಏಳುತ್ತಾರೆ, ರಕ್ತ ಕ್ರಾಂತಿ ಆಗುತ್ತದೆ, ಬಾಂಗ್ಲಾ ದೇಶದ ಪ್ರಧಾನಿ ದೇಶ ಬಿಟ್ಟ ಪರಿಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನಿಜಕ್ಕೂ ಖಂಡನೀಯ. ಕಾಂಗ್ರೆಸ್ ಪಕ್ಷ ಸಂವಿಧಾನಬದ್ಧವಾಗಿ ಆಡಳಿತ ನಡೆಸುತ್ತಿದೆ ಎಂಬ ವಿಶ್ವಾಸ ಜನರಲ್ಲಿ ಗಟ್ಟಿಗೊಳ್ಳಬೇಕಾದರೆ ಸಿದ್ದರಾಮಯ್ಯನವರು ಕಾನೂನು ಹೋರಾಟ ಮಾಡಲಿ.

-ಮುಳ್ಳೂರು ಪ್ರಕಾಶ್, ದಟ್ಟಗಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

3 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

4 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

7 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

7 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

7 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

7 hours ago