ಓದುಗರ ಪತ್ರ
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಕೆಲವರು ಕಲ್ಲು ತೂರಾಟ ಮಾಡಿದ ಪರಿಣಾಮವಾಗಿ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಗ್ರ್ಯಾಜುಯೇಟ್ಸ್ ಕೋ – ಆಪರೇಟೀವ್ ಸೊಸೈಟಿಯ ಸರ್ವ ಸದಸ್ಯರ ಸಭೆಯಲ್ಲಿ, ಸೊಸೈಟಿಯ ಇ-ಸ್ಟಾಂಪ್ ವಿಭಾಗದಲ್ಲಿ ಕೆಲಸ ಮಾಡುವ ನಗ್ಮಾ ಬಾನು ಅವರು ಗರ್ಭಿಣಿಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಹಿಂದೂ ಧರ್ಮದ ಸಂಪ್ರದಾಯದಂತೆ, ಸೀಮಂತ ಮಾಡಿ, ಉಡಿ ತುಂಬಿ, ಹೊಸ ಸೀರೆ ಉಡುಗೊರೆ ನೀಡಿ, ಸಭೆಗೆ ಆಗಮಿಸಿದ್ದ ಎಲ್ಲ ಮಹಿಳೆಯರೂ ಆಕೆಯನ್ನು ಆಶೀರ್ವದಿಸಿರುವುದು ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ.
ನಮ್ಮ ಧರ್ಮಗಳ ಆಚರಣೆಯನ್ನು ಮೀರಿ ನಡೆಯುವ ಇಂತಹ ಕಾರ್ಯಕ್ರಮಗಳು ಮಾನವೀಯ ಸಂಬಂಧಗಳಿಗೆ ಜ್ವಲಂತ ಉದಾಹರಣೆಯಾಗಿದೆ. ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಜಾತಿ, ಮತ, ಪಂಥ ಬಿಟ್ಟು ನಡೆಯುವ ಇಂತಹ ಕಾರ್ಯಕ್ರಮಗಳಿಂದ ಜನರು ಸೌಹಾರ್ದತೆಯಿಂದ ಬಾಳುವಂತಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…