ಗ್ರಾಮೀಣ ಪ್ರದೇಶಗಳಲ್ಲಿರುವ ಅನೇಕ ಸರ್ಕಾರಿ ಕಟ್ಟಡಗಳು ಶಿಥಿಲಗೊಂಡಿದ್ದು, ಮಳೆ ನೀರು ನಿಂತು ಸೋರಿಕೆಯಾಗುವ ಜತೆಗೆ ಕಿಟಕಿ, ಬಾಗಿಲುಗಳು ಮುರಿದುಬಿದ್ದಿದ್ದು, ಕುಸಿದು ಬೀಳುವ ಹಂತಕ್ಕೆ ತಲುಪಿವೆ.
ಸರ್ಕಾರ ಸರ್ಕಾರಿ ಕಚೇರಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದಿರಲಿ ಕನಿಷ್ಠ ಪಕ್ಷ ಅಂಗನವಾಡಿ ಕೇಂದ್ರಗಳಿಗೆ ಕನಿಷ್ಠ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಇನ್ನು ಸರ್ಕಾರಿ ಶಾಲೆಗಳಲ್ಲಿಯೂ ಮೂಲಸೌಕರ್ಯಗಳ ಕೊರತೆ, ಶಿಕ್ಷಕರ ಕೊರತೆ ಹೆಚ್ಚಾಗಿದ್ದು, ದಾಖಲಾತಿ ಪ್ರಮಾಣ ಇಳಿಮುಖವಾಗುತ್ತಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಇನ್ನೂ ಕೆಲ ಗ್ರಾಮಗಳಲ್ಲಿ ಸರ್ಕಾರಿ ಕಟ್ಟಡಗಳನ್ನು ಖಾಸಗಿ ವ್ಯಕ್ತಿಗಳು ಬಳಕೆ ಮಾಡುತ್ತಿರುವ ಆರೋಪಗಳಿವೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಸರ್ಕಾರಿ ಕಚೇರಿಗಳನ್ನು ಅಭಿವೃದ್ಧಿಪಡಿಸುವ ಜತೆಗೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕಿದೆ ಹಾಗೂ ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…
ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…
ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…
ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…
ವಿಶ್ವಸಂಸ್ಥೆ : ಇರಾನ್ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…
ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…