Andolana originals

ಓದುಗರ ಪತ್ರ: ಸರ್ಕಾರಿ ಕಟ್ಟಡಗಳು ಅಭಿವೃದ್ಧಿಯಾಗಲಿ

ಗ್ರಾಮೀಣ ಪ್ರದೇಶಗಳಲ್ಲಿರುವ ಅನೇಕ ಸರ್ಕಾರಿ ಕಟ್ಟಡಗಳು ಶಿಥಿಲಗೊಂಡಿದ್ದು, ಮಳೆ ನೀರು ನಿಂತು ಸೋರಿಕೆಯಾಗುವ ಜತೆಗೆ ಕಿಟಕಿ,  ಬಾಗಿಲುಗಳು ಮುರಿದುಬಿದ್ದಿದ್ದು, ಕುಸಿದು ಬೀಳುವ ಹಂತಕ್ಕೆ ತಲುಪಿವೆ.

ಸರ್ಕಾರ ಸರ್ಕಾರಿ ಕಚೇರಿಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವುದಿರಲಿ ಕನಿಷ್ಠ ಪಕ್ಷ ಅಂಗನವಾಡಿ ಕೇಂದ್ರಗಳಿಗೆ ಕನಿಷ್ಠ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಇನ್ನು ಸರ್ಕಾರಿ ಶಾಲೆಗಳಲ್ಲಿಯೂ ಮೂಲಸೌಕರ್ಯಗಳ ಕೊರತೆ, ಶಿಕ್ಷಕರ ಕೊರತೆ ಹೆಚ್ಚಾಗಿದ್ದು, ದಾಖಲಾತಿ ಪ್ರಮಾಣ ಇಳಿಮುಖವಾಗುತ್ತಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿವೆ. ಇನ್ನೂ ಕೆಲ ಗ್ರಾಮಗಳಲ್ಲಿ ಸರ್ಕಾರಿ ಕಟ್ಟಡಗಳನ್ನು ಖಾಸಗಿ ವ್ಯಕ್ತಿಗಳು ಬಳಕೆ ಮಾಡುತ್ತಿರುವ ಆರೋಪಗಳಿವೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಮನಹರಿಸಿ ಸರ್ಕಾರಿ ಕಚೇರಿಗಳನ್ನು ಅಭಿವೃದ್ಧಿಪಡಿಸುವ ಜತೆಗೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕಿದೆ  ಹಾಗೂ ಎಲ್ಲ ಗ್ರಾಮಗಳಲ್ಲಿಯೂ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago