Andolana originals

ಓದುಗರ ಪತ್ರ: ಭಾರತ ಎಚ್ಚರಿಕೆಯಿಂದ ಆಟವಾಡಲಿ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸೀರಿಸ್‌ನಲ್ಲಿ ಭಾರತದ ಕಳಪೆ ಪ್ರದರ್ಶನ ಮುಂದುವರಿದಿದ್ದು, ನಾಲ್ಕನೆಯ ಟೆಸ್ಟ್‌ನಲ್ಲಿಯೂ ಹೀನಾಯ ಸೋಲು ಅನುಭವಿಸಿದೆ.

ಇದು ಒಪ್ಪುವಂತಹ ಸೋಲಲ್ಲ. ಬಲಿಷ್ಠ ತಂಡವಾದ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತರೆ ಅದೇನು ವಿಶೇಷ ಅನಿಸುವುದಿಲ್ಲ. ಆದರೆ ಈ ರೀತಿಯ ಕಳಪೆ ಪ್ರದರ್ಶನದಿಂದ ಸೋತರೆ ಆ ಸೋಲನ್ನು ಸೋಲು ಅನ್ನುವುದಕ್ಕಿಂತ ಶರಣಾಗತಿ ಎನ್ನಲೇಬೇಕು. ಮೊದಲ ಇನ್ನಿಂಗ್ಸ್‌ನಲ್ಲಿ ಎರಡೂ ತಂಡಗಳು ಉತ್ತಮ ಪ್ರರ್ದಶನ ನೀಡಿದ್ದವು. ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ ೩೩೩ ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಭಾರತ ಸುಲಭವಾಗಿ ಗೆಲ್ಲಲಿದೆ ಎಂಬ ವಿಶ್ವಾಸ ಎಲ್ಲರಲ್ಲಿಯೂ ಇತ್ತು. ಆದರೆ ಅನುಭವಿ ಆಟಗಾರರ ಕಳಪೆ ಪ್ರದರ್ಶನ ಭಾರತ ತಂಡದ ಹೀನಾಯ ಸೋಲಿಗೆ ಕಾರಣವಾಯಿತು. ಭಾರತೀಯ ಕ್ರಿಕೆಟ್ ಮಂಡಳಿ ಹಾಗೂ ಆಯ್ಕೆ ಸಮಿತಿಯವರು ಇಂತಹ ಪ್ರತಿಷ್ಠಿತ ಪಂದ್ಯಾವಳಿಗಳಿಗೆ ಆಟಗಾರರನ್ನು ಆಯ್ಕೆ ಮಾಡುವಾಗ ಅನುಭವಸ್ಥ ಮತ್ತು ಹಿರಿಯ ಆಟಗಾರರು ಎಂದು ಪರಿಗಣಿಸದೆ ಉತ್ತಮ ಲಯದಲ್ಲಿರುವ ಆಟಗಾರರನ್ನು ಆಯ್ಕೆ ಮಾಡಿ ಕಳುಹಿಸಬೇಕು ಹಾಗೂ ಆಟಗಾರರಿಗೆ ಗರಿಷ್ಟ ವಯೋಮಿತಿ ನಿಗದಿ ಮಾಡಬೇಕು. ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡ ಎಚ್ಚರಿಕೆಯಿಂದ ಆಟವಾಡಲಿ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

13 mins ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

15 mins ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

18 mins ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

3 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

3 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 hours ago