ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸೀರಿಸ್ನಲ್ಲಿ ಭಾರತದ ಕಳಪೆ ಪ್ರದರ್ಶನ ಮುಂದುವರಿದಿದ್ದು, ನಾಲ್ಕನೆಯ ಟೆಸ್ಟ್ನಲ್ಲಿಯೂ ಹೀನಾಯ ಸೋಲು ಅನುಭವಿಸಿದೆ.
ಇದು ಒಪ್ಪುವಂತಹ ಸೋಲಲ್ಲ. ಬಲಿಷ್ಠ ತಂಡವಾದ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋತರೆ ಅದೇನು ವಿಶೇಷ ಅನಿಸುವುದಿಲ್ಲ. ಆದರೆ ಈ ರೀತಿಯ ಕಳಪೆ ಪ್ರದರ್ಶನದಿಂದ ಸೋತರೆ ಆ ಸೋಲನ್ನು ಸೋಲು ಅನ್ನುವುದಕ್ಕಿಂತ ಶರಣಾಗತಿ ಎನ್ನಲೇಬೇಕು. ಮೊದಲ ಇನ್ನಿಂಗ್ಸ್ನಲ್ಲಿ ಎರಡೂ ತಂಡಗಳು ಉತ್ತಮ ಪ್ರರ್ದಶನ ನೀಡಿದ್ದವು. ಎರಡನೇ ಇನ್ನಿಂಗ್ಸ್ನಲ್ಲಿ ಆಸ್ಟ್ರೇಲಿಯಾ ಭಾರತಕ್ಕೆ ೩೩೩ ರನ್ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಭಾರತ ಸುಲಭವಾಗಿ ಗೆಲ್ಲಲಿದೆ ಎಂಬ ವಿಶ್ವಾಸ ಎಲ್ಲರಲ್ಲಿಯೂ ಇತ್ತು. ಆದರೆ ಅನುಭವಿ ಆಟಗಾರರ ಕಳಪೆ ಪ್ರದರ್ಶನ ಭಾರತ ತಂಡದ ಹೀನಾಯ ಸೋಲಿಗೆ ಕಾರಣವಾಯಿತು. ಭಾರತೀಯ ಕ್ರಿಕೆಟ್ ಮಂಡಳಿ ಹಾಗೂ ಆಯ್ಕೆ ಸಮಿತಿಯವರು ಇಂತಹ ಪ್ರತಿಷ್ಠಿತ ಪಂದ್ಯಾವಳಿಗಳಿಗೆ ಆಟಗಾರರನ್ನು ಆಯ್ಕೆ ಮಾಡುವಾಗ ಅನುಭವಸ್ಥ ಮತ್ತು ಹಿರಿಯ ಆಟಗಾರರು ಎಂದು ಪರಿಗಣಿಸದೆ ಉತ್ತಮ ಲಯದಲ್ಲಿರುವ ಆಟಗಾರರನ್ನು ಆಯ್ಕೆ ಮಾಡಿ ಕಳುಹಿಸಬೇಕು ಹಾಗೂ ಆಟಗಾರರಿಗೆ ಗರಿಷ್ಟ ವಯೋಮಿತಿ ನಿಗದಿ ಮಾಡಬೇಕು. ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ ತಂಡ ಎಚ್ಚರಿಕೆಯಿಂದ ಆಟವಾಡಲಿ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…