Andolana originals

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ ಅವರು ಕುಂಟುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಯವರು ಹೇಳಿಕೆ ನೀಡಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಡಿನೋವು ಕಾಣಿಸಿಕೊಂಡಿರುವುದಕ್ಕೂ ಏನು ಸಂಬಂಧ? ಜವಾಬ್ದಾರಿಯುತ ಸ್ಥಾನದಲ್ಲಿರುವ ನಾರಾಯಣಸ್ವಾಮಿಯವರಿಗೆ ಯಾವುದನ್ನು ಯಾವುದಕ್ಕೆ ಹೋಲಿಸಿ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ? ಈಗ ವ್ಹೀಲ್‌ಚೇರ್‌ನಲ್ಲಿ ಓಡಾಡುತ್ತಿರುವ ಸಿದ್ದರಾಮಯ್ಯನವರಿಗೆ ಮುಂದಿನ ದಿನಗಳಲ್ಲಿ ಬೇರೆಯೇ ಚೇರ್ ಬರಲಿದೆ ಎಂದು ಹೇಳಿರುವುದು ನಾರಾಯಣಸ್ವಾಮಿಯವರ ಕೆಟ್ಟ ಮನಃಸ್ಥಿತಿಯನ್ನು ತೋರಿಸುತ್ತದೆ. ಅವರು ಯಾರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೋ ತಿಳಿಯದು. ಆದರೆ ಇಂತಹ ಹೇಳಿಕೆಗಳು ಅವರ ಘನತೆಯನ್ನು ಕುಗ್ಗಿಸುತ್ತವೆ. ಮುಂದಾದರೂ ಅವರು ಜವಾಬ್ದಾರಿಯುತವಾಗಿ ವರ್ತಿಸುವುದನ್ನು ಕಲಿಯಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

29 mins ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

17 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

17 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

20 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

22 hours ago