ಓದುಗರ ಪತ್ರ
ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ ಅವರು ಕುಂಟುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಯವರು ಹೇಳಿಕೆ ನೀಡಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿದ ಹಣ ಬೇರೆ ಖಾತೆಗಳಿಗೆ ವರ್ಗಾವಣೆಯಾಗುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಂಡಿನೋವು ಕಾಣಿಸಿಕೊಂಡಿರುವುದಕ್ಕೂ ಏನು ಸಂಬಂಧ? ಜವಾಬ್ದಾರಿಯುತ ಸ್ಥಾನದಲ್ಲಿರುವ ನಾರಾಯಣಸ್ವಾಮಿಯವರಿಗೆ ಯಾವುದನ್ನು ಯಾವುದಕ್ಕೆ ಹೋಲಿಸಿ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವಾದರೂ ಬೇಡವೇ? ಈಗ ವ್ಹೀಲ್ಚೇರ್ನಲ್ಲಿ ಓಡಾಡುತ್ತಿರುವ ಸಿದ್ದರಾಮಯ್ಯನವರಿಗೆ ಮುಂದಿನ ದಿನಗಳಲ್ಲಿ ಬೇರೆಯೇ ಚೇರ್ ಬರಲಿದೆ ಎಂದು ಹೇಳಿರುವುದು ನಾರಾಯಣಸ್ವಾಮಿಯವರ ಕೆಟ್ಟ ಮನಃಸ್ಥಿತಿಯನ್ನು ತೋರಿಸುತ್ತದೆ. ಅವರು ಯಾರನ್ನು ಮೆಚ್ಚಿಸಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೋ ತಿಳಿಯದು. ಆದರೆ ಇಂತಹ ಹೇಳಿಕೆಗಳು ಅವರ ಘನತೆಯನ್ನು ಕುಗ್ಗಿಸುತ್ತವೆ. ಮುಂದಾದರೂ ಅವರು ಜವಾಬ್ದಾರಿಯುತವಾಗಿ ವರ್ತಿಸುವುದನ್ನು ಕಲಿಯಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…