Andolana originals

ಓದುಗರ ಪತ್ರ: ಸ್ಪರ್ಧಾತ್ಮಕ ಪರೀಕ್ಷೆಗಳು ವಿಶ್ವಾಸಾರ್ಹವಾಗಿರಲಿ

ಇತ್ತೀಚೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುತ್ತಿರುವ ಜತೆಗೆ ಗೊಂದಲ ಮೂಡಿಸುವಂತಹ ಪ್ರಶ್ನೆಗಳು ಹೆಚ್ಚಾಗುತ್ತಿದ್ದು, ಪರೀಕ್ಷಾರ್ಥಿಗಳನ್ನು ಗೊಂದಲಕ್ಕೀಡು ಮಾಡುತ್ತಿದೆ. ಪ್ರತಿಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಾಗ ಪ್ರಶ್ನೆ ಪತ್ರಿಕೆಯ ಸೋರಿಕೆಯಿಂದಾಗಿ ಅನೇಕ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ. ಈ ಬಗ್ಗೆ ಹೋರಾಟಗಳು ನಡೆದರೂ ಅಭ್ಯರ್ಥಿಗಳಿಗೆ ನ್ಯಾಯ ದೊರಕುವುದು ದೂರದ ಮಾತು. ಇದು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾತ್ರವಲ್ಲ. ಸಾಕಷ್ಟು ಬಾರಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವೀತಿಯ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು, ವಿದ್ಯಾರ್ಥಿಗಳಿಗೆ ಗೊಂದಲ ಮೂಡಿಸುವ ಪ್ರಶ್ನೆಗಳಿರುವುದನ್ನು ನೋಡಿದ್ದೇವೆ. ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಂತಹ ಶಿಕ್ಷಕರು ಅಥವಾ ಸಂಸ್ಥೆಯವರು ಯಾವುದೇ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವಾಗ ವಿದ್ಯಾರ್ಥಿ ಹಾಗೂ ಅಭ್ಯರ್ಥಿಗಳಿಗೆ ಗೊಂದಲ ಮೂಡಿಸುವ ಪ್ರಶ್ನೆಗಳನ್ನು ರಚಿಸದೆ, ಪ್ರಶ್ನೆಗಳನ್ನು ಸರಳವಾಗಿ ಅರ್ಥವಾಗುವಂತೆ ರಚಿಸಬೇಕು. ಅಲ್ಲದೆ ಪ್ರಶ್ನೆ ಪತ್ರಿಕೆಗಳು ಯಾವುದೇ ಕಾರಣಕ್ಕೂ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಆಗ ಮಾತ್ರ ಪರೀಕ್ಷೆ ನಡೆಸುವ ಮೇಲೆ ವಿಶ್ವಾಸ ಮೂಡಲು ಸಾಧ್ಯ.

-ಬಿ.ಟಿ.ಅಂಬಿಕಾ, ಹಾಸನ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago