Andolana originals

ಓದುಗರ ಪತ್ರ: ಗುಣಮಟ್ಟದ ಕಾಮಗಾರಿ ನಡೆಯಲಿ

ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯು ಪಾರಂಪರಿಕ ಸಂಗ್ರಹಾಲಯವಾಗುತ್ತಿದ್ದು, 23ನೇ ಮೈಸೂರು ಮಹಾರಾಜರಾಗಿದ್ದ 10ನೇ ಚಾಮರಾಜ ಒಡೆಯರ್ ಆಡಳಿತದಲ್ಲಿ ನಿರ್ಮಿಸಿದ್ದ 129 ವರ್ಷಗಳ ಹಳೆಯ ಕಟ್ಟಡವನ್ನು ಪಾರಂಪರಿಕ ಸಂಗ್ರಹಾಲಯವನ್ನಾಗಿ ರೂಪಿಸುತ್ತಿರುವುದು ಶ್ಲಾಘನೀಯ.
ಕೇಂದ್ರ ಸರ್ಕಾರದ ಸ್ವದೇಶ್ 20 ಯೋಜನೆಯಡಿ ರಾಜಮನೆತನದ ಆಡಳಿತವನ್ನು ಬಿಂಬಿಸುವ ಪಾರಂಪರಿಕ ಸಂಗ್ರಹಾಲಯವನ್ನಾಗಿ ರೂಪುಗೊಳಿಸುವ ಕಾಮಗಾರಿಗೆ ಡಿಪಿಆರ್‌ ಅನುಮೋದನೆಯಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಯೋಜನೆಗೆ 80 ಕೋಟಿ ರೂ. ಅನುದಾನ ಮಂಜೂರು ಮಾಡಿರುವುದು ಅಭಿನಂದನಾರ್ಹ. ಕರ್ನಾಟಕ ಪ್ರವಾಸೋದ್ಯರು ಮೂಲಸೌಕರ್ಯ ಅಭಿವೃದ್ಧಿ ನಿಗಮವು ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಏಜೆನ್ಸಿಯಾಗಿದ್ದು, ಕೃಷ್ಣರಾಜ ಬುಲೇ ವಾರ್ಡ್ ರಸ್ತೆಯನ್ನು ಪಾರಂಪರಿಕ ರಸ್ತೆಯನ್ನಾಗಿ ಹಾಗೂ ಡಿ.ದೇವರಾಜ ಅರಸು ರಸ್ತೆಯ ಜೆಎಲ್‌ಬಿ ರಸ್ತೆ ಜಂಕ್ಷನ್ ನಿಂದ ಹಳೆಯ ಜಿಲ್ಲಾಧಿಕಾರಿ ಕಚೇರಿವರೆಗೆ ದಾಹನ ಸಂಚಾರವನ್ನು ನಿಷೇಧಿಸಿ ಪಾದಾಚಾರಿ ಮಾರ್ಗಗಳನ್ನಾಗಿ ರೂಪಿಸುವ ಕೆಲಸವೂ ಮೆಚ್ಚುವಂತದ್ದು. ಈ ಯೋಜನೆಯಡಿ ಮೈಸೂರಿನ ಹೆರಿಟೇಜ್ ಟಾಂಗಾ ರೈಡ್, ಮೈಸೂರಿನ ಸಾಂಪ್ರದಾಯಿಕ ತಿನಿಸು, ತಿಂಡಿ ಹಾಗೂ ಪಾನೀಯಗಳು ಸಿಗುವುದರ ಜೊತೆಗೆ ಸಾಂಸ್ಕೃತಿಕ ನಗರಿಯ ಹಿನ್ನೆಲೆ, ಇತಿಹಾಸ ಹಾಗೂ ಗತವೈಭವದ ಮಾಹಿತಿಯೊಂದಿಗೆ ಅನನ್ಯ ಅನುಭವಗಳನ್ನು ತಮ್ಮದಾಗಿಸುವ ಅವಕಾಶ ಕಲ್ಪಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ಕೆ.ವಿ.ರಾಜೇಂದ್ರ ತಿಳಿಸಿರುವುದು ಸ್ವಾಗತಾರ್ಹ. ಸ್ವದೇಶ್‌ 2.0 ಯೋಜನೆಯಡಿ ಮಂಜೂರಾಗಿರುವ 80 ಕೋಟಿ ರೂ. ಅನುದಾನವನ್ನು ಸದುಪಯೋಗಪಡಿಸಿಕೊಂಡು ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳಬೇಕು ಎಂಬುದು ಮೈಸೂರಿನ ಜನತೆಯ ಆಶಯ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

47 mins ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

48 mins ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

50 mins ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

52 mins ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

56 mins ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago