Mysore
22
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಓದುಗರ ಪತ್ರ: ಸಿದರಾಮಯ್ಯನವರು ಸೌಜನ್ಯಯುತವಾಗಿ ಮಾತನಾಡಲಿ

ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆ ಜಿಲ್ಲಾಧಿಕಾರಿಯವರನ್ನು ಅವಮಾನಿಸಿದ ಘಟನೆ ನಡೆದಿದೆ.

ಜಿಲ್ಲಾಧಿಕಾರಿಯವರು ಕುಳಿತಿದ್ದನ್ನು ಗಮನಿಸಿದ ಸಿದ್ದರಾಮಯ್ಯನವರು ಮೊದಲಿಗೆ ನೀವು ಯಾರು ಎಂದು ಕೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಎಂದು ತಿಳಿದ ಬಳಿಕ, ನೀನೇಕೆ ಇಲ್ಲಿ ಕುಳಿತಿದ್ದೀಯ? ಸ್ವಾಮೀಜಿಯವರ ಪಕ್ಕದಲ್ಲಿ ಏಕೆ ಕುಳಿತಿದ್ದೀಯಾ? ಎಂದು ಹೇಳಿ ಹೋಗು ಹಿಂದೆ ಎಂದು ಏಕವಚನದಲ್ಲಿ ಗದರಿದ್ದಾರೆ. ಸಿದ್ದರಾಮಯ್ಯನವರ ಈ ನಡೆ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತಹದಲ್ಲ. ಒಬ್ಬ ಐಎಎಸ್ ಅಧಿಕಾರಿಯನ್ನು ಹೀಗೆ ಸಾರ್ವಜನಿಕ ವೇದಿಕೆಯ ಮೇಲೆ ಅವಮಾನಿಸುವುದು ಎಷ್ಟು ಸರಿ? ಶಿಷ್ಟಾಚಾರದ ಪ್ರಕಾರ ಜಿಲ್ಲಾಧಿಕಾರಿ ವೇದಿಕೆ ಮೇಲೆ ಕುಳಿತುಕೊಳ್ಳಬಾರದು ಎಂದಿದ್ದರೆ, ಅವರನ್ನು ಕರೆದು ಸೌಜನ್ಯಯುತವಾಗಿ ಹಿಂದಿನ ಆಸನಗಳಲ್ಲಿ ಕುಳಿತುಕೊಳ್ಳಲು ಸೂಚಿಸಬಹುದಿತ್ತು. ಆದರೆ ಅಧಿಕಾರ ದರ್ಪದಿಂದ ಜಿಲ್ಲಾಧಿಕಾರಿಯನ್ನು ಏಕವಚನದಲ್ಲಿ ಹಿಂದೆ ಹೋಗು ಎಂದು ಹೇಳಿದ್ದು, ಮುಖ್ಯಮಂತ್ರಿಗಳ ಸಣ್ಣತನವನ್ನು ತೋರಿದೆ. ಅಲ್ಲದೆ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಸ್ವಾಮೀಜಿಗಳ ಜತೆ ವೇದಿಕೆ ಹಂಚಿಕೊಳ್ಳುವುದು ತಪ್ಪು ಎಂಬುದು ಇದರ ಅರ್ಥ ಎನ್ನುವಂತಾಗಿದೆ. ಸಿದ್ದರಾಮಯ್ಯನವರ ಈ ವರ್ತನೆ ನಿಜಕ್ಕೂ ಖಂಡನೀಯ.

ಎ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ

Tags:
error: Content is protected !!