ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆ ಜಿಲ್ಲಾಧಿಕಾರಿಯವರನ್ನು ಅವಮಾನಿಸಿದ ಘಟನೆ ನಡೆದಿದೆ.
ಜಿಲ್ಲಾಧಿಕಾರಿಯವರು ಕುಳಿತಿದ್ದನ್ನು ಗಮನಿಸಿದ ಸಿದ್ದರಾಮಯ್ಯನವರು ಮೊದಲಿಗೆ ನೀವು ಯಾರು ಎಂದು ಕೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಎಂದು ತಿಳಿದ ಬಳಿಕ, ನೀನೇಕೆ ಇಲ್ಲಿ ಕುಳಿತಿದ್ದೀಯ? ಸ್ವಾಮೀಜಿಯವರ ಪಕ್ಕದಲ್ಲಿ ಏಕೆ ಕುಳಿತಿದ್ದೀಯಾ? ಎಂದು ಹೇಳಿ ಹೋಗು ಹಿಂದೆ ಎಂದು ಏಕವಚನದಲ್ಲಿ ಗದರಿದ್ದಾರೆ. ಸಿದ್ದರಾಮಯ್ಯನವರ ಈ ನಡೆ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತಹದಲ್ಲ. ಒಬ್ಬ ಐಎಎಸ್ ಅಧಿಕಾರಿಯನ್ನು ಹೀಗೆ ಸಾರ್ವಜನಿಕ ವೇದಿಕೆಯ ಮೇಲೆ ಅವಮಾನಿಸುವುದು ಎಷ್ಟು ಸರಿ? ಶಿಷ್ಟಾಚಾರದ ಪ್ರಕಾರ ಜಿಲ್ಲಾಧಿಕಾರಿ ವೇದಿಕೆ ಮೇಲೆ ಕುಳಿತುಕೊಳ್ಳಬಾರದು ಎಂದಿದ್ದರೆ, ಅವರನ್ನು ಕರೆದು ಸೌಜನ್ಯಯುತವಾಗಿ ಹಿಂದಿನ ಆಸನಗಳಲ್ಲಿ ಕುಳಿತುಕೊಳ್ಳಲು ಸೂಚಿಸಬಹುದಿತ್ತು. ಆದರೆ ಅಧಿಕಾರ ದರ್ಪದಿಂದ ಜಿಲ್ಲಾಧಿಕಾರಿಯನ್ನು ಏಕವಚನದಲ್ಲಿ ಹಿಂದೆ ಹೋಗು ಎಂದು ಹೇಳಿದ್ದು, ಮುಖ್ಯಮಂತ್ರಿಗಳ ಸಣ್ಣತನವನ್ನು ತೋರಿದೆ. ಅಲ್ಲದೆ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಸ್ವಾಮೀಜಿಗಳ ಜತೆ ವೇದಿಕೆ ಹಂಚಿಕೊಳ್ಳುವುದು ತಪ್ಪು ಎಂಬುದು ಇದರ ಅರ್ಥ ಎನ್ನುವಂತಾಗಿದೆ. ಸಿದ್ದರಾಮಯ್ಯನವರ ಈ ವರ್ತನೆ ನಿಜಕ್ಕೂ ಖಂಡನೀಯ.
–ಎ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…