Andolana originals

ಓದುಗರ ಪತ್ರ: ಸಿದರಾಮಯ್ಯನವರು ಸೌಜನ್ಯಯುತವಾಗಿ ಮಾತನಾಡಲಿ

ಇತ್ತೀಚೆಗೆ ವಿಜಯನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೇದಿಕೆ ಮೇಲೆ ಜಿಲ್ಲಾಧಿಕಾರಿಯವರನ್ನು ಅವಮಾನಿಸಿದ ಘಟನೆ ನಡೆದಿದೆ.

ಜಿಲ್ಲಾಧಿಕಾರಿಯವರು ಕುಳಿತಿದ್ದನ್ನು ಗಮನಿಸಿದ ಸಿದ್ದರಾಮಯ್ಯನವರು ಮೊದಲಿಗೆ ನೀವು ಯಾರು ಎಂದು ಕೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಎಂದು ತಿಳಿದ ಬಳಿಕ, ನೀನೇಕೆ ಇಲ್ಲಿ ಕುಳಿತಿದ್ದೀಯ? ಸ್ವಾಮೀಜಿಯವರ ಪಕ್ಕದಲ್ಲಿ ಏಕೆ ಕುಳಿತಿದ್ದೀಯಾ? ಎಂದು ಹೇಳಿ ಹೋಗು ಹಿಂದೆ ಎಂದು ಏಕವಚನದಲ್ಲಿ ಗದರಿದ್ದಾರೆ. ಸಿದ್ದರಾಮಯ್ಯನವರ ಈ ನಡೆ ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತಹದಲ್ಲ. ಒಬ್ಬ ಐಎಎಸ್ ಅಧಿಕಾರಿಯನ್ನು ಹೀಗೆ ಸಾರ್ವಜನಿಕ ವೇದಿಕೆಯ ಮೇಲೆ ಅವಮಾನಿಸುವುದು ಎಷ್ಟು ಸರಿ? ಶಿಷ್ಟಾಚಾರದ ಪ್ರಕಾರ ಜಿಲ್ಲಾಧಿಕಾರಿ ವೇದಿಕೆ ಮೇಲೆ ಕುಳಿತುಕೊಳ್ಳಬಾರದು ಎಂದಿದ್ದರೆ, ಅವರನ್ನು ಕರೆದು ಸೌಜನ್ಯಯುತವಾಗಿ ಹಿಂದಿನ ಆಸನಗಳಲ್ಲಿ ಕುಳಿತುಕೊಳ್ಳಲು ಸೂಚಿಸಬಹುದಿತ್ತು. ಆದರೆ ಅಧಿಕಾರ ದರ್ಪದಿಂದ ಜಿಲ್ಲಾಧಿಕಾರಿಯನ್ನು ಏಕವಚನದಲ್ಲಿ ಹಿಂದೆ ಹೋಗು ಎಂದು ಹೇಳಿದ್ದು, ಮುಖ್ಯಮಂತ್ರಿಗಳ ಸಣ್ಣತನವನ್ನು ತೋರಿದೆ. ಅಲ್ಲದೆ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಸ್ವಾಮೀಜಿಗಳ ಜತೆ ವೇದಿಕೆ ಹಂಚಿಕೊಳ್ಳುವುದು ತಪ್ಪು ಎಂಬುದು ಇದರ ಅರ್ಥ ಎನ್ನುವಂತಾಗಿದೆ. ಸಿದ್ದರಾಮಯ್ಯನವರ ಈ ವರ್ತನೆ ನಿಜಕ್ಕೂ ಖಂಡನೀಯ.

ಎ.ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

3 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

3 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

3 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

3 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

3 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

3 hours ago