ಓದುಗರ ಪತ್ರ
ರಾಜ್ಯದಲ್ಲಿ ೨೫,೦೦೦ ನವೋದ್ಯಮಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಐಟಿ, ಬಿಟಿ ಸೇರಿದಂತೆ ಎಲ್ಲ ಉದ್ಯಮಗಳನ್ನೂ ಬೆಂಗಳೂರಿನಲ್ಲೇ ಸ್ಥಾಪಿಸುತ್ತಿರುವುದರಿಂದ ಅಲ್ಲಿಗೆ ಉದ್ಯೋಗ ಅರಸಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ.
ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆ ಮಹಾನಗರಗಳಾದ ಮೈಸೂರು, ಮಂಗಳೂರು, ಹುಬ್ಬಳ್ಳಿ, ಧಾರವಾಡ ಮುಂತಾದ ನಗರಗಳ ಅಭಿವೃದ್ಧಿಯತ್ತಲೂ ರಾಜ್ಯ ಸರ್ಕಾರ ಗಮನ ಹರಿಸಬೇಕಾಗಿದೆ. ಈಗ ಮೈಸೂರು ಮಹಾನಗರವನ್ನು ಗ್ರೇಟರ್ ಮೈಸೂರು ಆಗಿ ಪರಿವರ್ತಿಸುವ ಯತ್ನ ನಡೆದಿದೆ. ಅದೇ ರೀತಿ ಈಗ ಸ್ಥಾಪಿಸಲು ಹೊರಟಿರುವ ೨೫,೦೦೦ ನವ ಉದ್ಯಮಗಳನ್ನು ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲದೆ ಇಡೀ ರಾಜ್ಯದ ಉದ್ದಗಲಕ್ಕೂ ವಿಸ್ತರಿಸಲು ರಾಜ್ಯ ಸರ್ಕಾರ ತುರ್ತು ಗಮನ ಹರಿಸಬೇಕಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…