ಓದುಗರ ಪತ್ರ
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ ಜಿಲ್ಲಾಧಿಕಾರಿಯಾಗಲಿ, ಮಹಾನಗರ ಪಾಲಿಕೆ ಆಯುಕ್ತರಾಗಲಿ, ವಿವಿಧ ಇಲಾಖೆಗಳ ಮುಖ್ಯಸ್ಥರಾಗಲಿ ಅಥವಾ ಕುಂದು ಕೊರತೆ ವಿಭಾಗದ ಮುಖ್ಯಸ್ಥರಾಗಲಿ ಸಾಮಾಜಿಕ ಮಾಧ್ಯಮದಲ್ಲಿ ಕ್ರಿಯಾಶೀಲವಾಗಿಲ್ಲ. ಇದರಿಂದಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಸಾರ್ವಜನಿಕರು ಪತ್ರ ಮುಖೇನ ಸಂಬಂಧಪಟ್ಟ ಇಲಾಖೆಗಳ ಕುಂದುಕೊರತೆ ವಿಭಾಗಗಳಿಗೆ ದೂರು ನೀಡಿದರೆ ಸಮಸ್ಯೆ ಪರಿಹಾರವಾಗಲು ತಿಂಗಳುಗಳೇ ಬೇಕಾಗಬಹುದು. ಉದಾಹರಣೆಗೆ ಕಬಿನಿ ನೀರಿಗಾಗಿ ನ್ಯಾಯಾಂಗ ಬಡಾವಣೆ, ಖಜಾನೆ ಲೇಔಟ್, ಕಾವೇರಿ ಗ್ರಾಮೀಣ ಬ್ಯಾಂಕ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೈಪ್ ಲೈನ್ ಹಾಕಿ ಆರು ತಿಂಗಳುಗಳು ಕಳೆದರೂ ನೀರು ಪೂರೈಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪ್ರಶ್ನಿಸಿದರೆ ಸಂಬಂಧಪಟ್ಟ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗುತ್ತಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದರೆ ಅಧಿಕಾರಿಗಳು ಉತ್ತರಿಸುತ್ತಿಲ್ಲ.
ಈಗಲಾದರೂ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲರಾಗುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಅಗತ್ಯ.
-ಸುರಭಿ ಭಟ್, ರೂಪ ನಗರ, ಮೈಸೂರು
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…