Andolana originals

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ ಜಿಲ್ಲಾಧಿಕಾರಿಯಾಗಲಿ, ಮಹಾನಗರ ಪಾಲಿಕೆ ಆಯುಕ್ತರಾಗಲಿ, ವಿವಿಧ ಇಲಾಖೆಗಳ ಮುಖ್ಯಸ್ಥರಾಗಲಿ ಅಥವಾ ಕುಂದು ಕೊರತೆ ವಿಭಾಗದ ಮುಖ್ಯಸ್ಥರಾಗಲಿ ಸಾಮಾಜಿಕ ಮಾಧ್ಯಮದಲ್ಲಿ ಕ್ರಿಯಾಶೀಲವಾಗಿಲ್ಲ. ಇದರಿಂದಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಸಾರ್ವಜನಿಕರು ಪತ್ರ ಮುಖೇನ ಸಂಬಂಧಪಟ್ಟ ಇಲಾಖೆಗಳ ಕುಂದುಕೊರತೆ ವಿಭಾಗಗಳಿಗೆ ದೂರು ನೀಡಿದರೆ ಸಮಸ್ಯೆ ಪರಿಹಾರವಾಗಲು ತಿಂಗಳುಗಳೇ ಬೇಕಾಗಬಹುದು. ಉದಾಹರಣೆಗೆ ಕಬಿನಿ ನೀರಿಗಾಗಿ ನ್ಯಾಯಾಂಗ ಬಡಾವಣೆ, ಖಜಾನೆ ಲೇಔಟ್, ಕಾವೇರಿ ಗ್ರಾಮೀಣ ಬ್ಯಾಂಕ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೈಪ್ ಲೈನ್ ಹಾಕಿ ಆರು ತಿಂಗಳುಗಳು ಕಳೆದರೂ ನೀರು ಪೂರೈಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪ್ರಶ್ನಿಸಿದರೆ ಸಂಬಂಧಪಟ್ಟ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗುತ್ತಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದರೆ ಅಧಿಕಾರಿಗಳು ಉತ್ತರಿಸುತ್ತಿಲ್ಲ.

ಈಗಲಾದರೂ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲರಾಗುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಅಗತ್ಯ.

-ಸುರಭಿ ಭಟ್, ರೂಪ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

2 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

5 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

9 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

12 mins ago

ಕೆ.ಟಿ.ಶಿವಪ್ರಸಾದ್ ಎಂಬ ಅಜೂಬಾ!

ರೂಪ ಹಾಸನ ನೇಪಥ್ಯಕ್ಕೆ ಸರಿದ ಅಂತಾರಾಷ್ಟ್ರಿಯ ಖ್ಯಾತಿಯ ಅದ್ಭುತ ಕಲಾವಿದ ಮೂರು ದಶಕಗಳ ಹಿಂದೆ ಮದುವೆಯಾಗಿ ಹಾಸನಕ್ಕೆ ಬಂದ ಹೊಸತು.…

17 mins ago

ಕೆರೆ ಕಟ್ಟೆ ಸಮೀಪದಲ್ಲಿ ವಾಮಾಚಾರ; ಜನರಲ್ಲಿ ಭೀತಿ

ಮಂಜು ಕೋಟೆ ಸವ್ವೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಕೆರೆಯ ಬಳಿ ಮಾಟ-ಮಂತ್ರ; ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಆಗ್ರಹ ಎಚ್.ಡಿ.ಕೋಟೆ:…

20 mins ago