Mysore
30
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ ಇದು ಕೇವಲ ನಾಮಕಾವಸ್ತೆಗಾಗಿ ಕಟ್ಟಿರುವ ಬಸ್ ನಿಲ್ದಾಣವಾಗಿದೆ. ಏಕೆಂದರೆ ಈ ಬಸ್ ನಿಲ್ದಾಣಕ್ಕೆ ಯಾವುದೇ ಸಾರಿಗೆ ನಿಗಮದ ಬಸ್‌ಗಳನ್ನು ನಿಲ್ಲಿಸುವುದಿಲ್ಲ, ಈ ಸರ್ಕಲ್‌ಗೆ ಬರುವ ಕೆಎಸ್ ಆರ್‌ಟಿಸಿ ಬಸ್‌ಗಳೆಲ್ಲವೂ ಶಾರದಾ ದೇವಿನಗರ ಸರ್ಕಲ್‌ನ ಮುಖ್ಯ ರಸ್ತೆಯಲ್ಲೇ ನಿಲುಗಡೆ ಮಾಡುತ್ತಾರೆ. ಈ ಮುಖ್ಯ ರಸ್ತೆಯಲ್ಲೇ ಉರಿಯುವ ಬಿಸಿಲಿನಲ್ಲಿ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು, ಮಕ್ಕಳು ಕೆಎಸ್‌ಆರ್‌ಟಿಸಿ ಬಸ್‌ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹೊಸದಾಗಿ ನಿರ್ಮಾಣ ಆಗಿರುವ ಬಸ್ ನಿಲ್ದಾಣದಲ್ಲಿ ಕೆಲವರು ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ. ಇಷ್ಟು ಹಣ ಖರ್ಚು ಮಾಡಿ ನೂತನ ಬಸ್ ನಿಲ್ದಾಣ ನಿರ್ಮಾಣ ಮಾಡಿರುವುದು ಕಾಂಟ್ರಾಕ್ಟ್‌ಗಳ ಜೇಬು ತುಂಬಿಸಲು ಮತ್ತು ಖಾಸಗಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಇರಬಹುದು ಎನಿಸುತ್ತದೆ. ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳು ಶಾರದಾ ದೇವಿ ಸರ್ಕಲ್‌ನಿಂದ ಹೊರಡುವ ಸಾರಿಗೆ ನಿಗಮದ ಎಲ್ಲಾ ಬಸ್ಗಳು ಕಡ್ಡಾಯವಾಗಿ ಹೊಸ ಬಸ್ ನಿಲ್ದಾಣಕ್ಕೆ ಬಂದು ಹೋಗುವ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

Tags:
error: Content is protected !!