ಓದುಗರ ಪತ್ರ
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ ಕಡೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( ಕೆಎಸ್ಆರ್ಟಿ ಸಿ) ಬಸ್ಸುಗಳು ಸಂಚರಿಸುತ್ತವೆ. ಇಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿದ್ದರೂ, ಬಸ್ ತಂಗುದಾಣದಿಂದ ಸುಮಾರು ೫೦ -೧೦೦ ಮೀಟರ್ಗಳಷ್ಟು ಹಿಂದೆ ಅಥವಾ ಮುಂದೆ ರಸ್ತೆಯಲ್ಲಿ ಬಸ್ ನಿಲ್ಲಿಸುವುದನ್ನು ರೂಢಿಸಿಕೊಂಡಿದ್ದಾರೆ. ಇದರಿಂದಾಗಿ ಪ್ರಯಾಣಿಕರು, ಅದರಲ್ಲೂ ಮುಖ್ಯವಾಗಿ ಮಕ್ಕಳೊಂದಿಗೆ ಬರುವ ಮಹಿಳೆಯರು ಹಾಗೂ ವೃದ್ಧರಿಗೆ ತುಂಬಾ ತೊಂದರೆಯಾಗುತ್ತಿದೆ. ವಾಹನ ಸಂಚಾರವಿರುವ ಸ್ಥಳದಲ್ಲೆ ಬಸ್ಗಳನ್ನು ನಿಲ್ಲಿಸುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಯಿರುತ್ತದೆ.
ಈ ಸ್ಥಳದಲ್ಲಿ ಪ್ರತಿ ದಿನ ಕರ್ತವ್ಯ ನಿರ್ವಹಿಸುವ ಸಂಚಾರ ಪೊಲೀಸರು ಈ ಸಮಸ್ಯೆಯನ್ನು ಕಂಡೂ ಕಾಣದಂತೆ ಇರುವುದು ಬೇಸರದ ಸಂಗತಿಯಾಗಿದೆ.
ಮೈಸೂರು ನಗರದ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಮತ್ತು ಮೈಸೂರು ನಗರದ ಪೊಲೀಸ್ ಆಯುಕ್ತರು ಬಸ್ ನಿಲ್ದಾಣದಲ್ಲಿಯೇ ಬಸ್ಗಳನ್ನು ಕಡ್ಡಾಯವಾಗಿ ನಿಲುಗಡೆ ಮಾಡುವಂತೆ ಸಾರಿಗೆ ನಿಗಮದ ಬಸ್ ಚಾಲಕರಿಗೆ ಸೂಕ್ತ ನಿರ್ದೇಶನ ನೀಡಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…