ಓದುಗರ ಪತ್ರ
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ ಕಡೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( ಕೆಎಸ್ಆರ್ಟಿ ಸಿ) ಬಸ್ಸುಗಳು ಸಂಚರಿಸುತ್ತವೆ. ಇಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಿದ್ದರೂ, ಬಸ್ ತಂಗುದಾಣದಿಂದ ಸುಮಾರು ೫೦ -೧೦೦ ಮೀಟರ್ಗಳಷ್ಟು ಹಿಂದೆ ಅಥವಾ ಮುಂದೆ ರಸ್ತೆಯಲ್ಲಿ ಬಸ್ ನಿಲ್ಲಿಸುವುದನ್ನು ರೂಢಿಸಿಕೊಂಡಿದ್ದಾರೆ. ಇದರಿಂದಾಗಿ ಪ್ರಯಾಣಿಕರು, ಅದರಲ್ಲೂ ಮುಖ್ಯವಾಗಿ ಮಕ್ಕಳೊಂದಿಗೆ ಬರುವ ಮಹಿಳೆಯರು ಹಾಗೂ ವೃದ್ಧರಿಗೆ ತುಂಬಾ ತೊಂದರೆಯಾಗುತ್ತಿದೆ. ವಾಹನ ಸಂಚಾರವಿರುವ ಸ್ಥಳದಲ್ಲೆ ಬಸ್ಗಳನ್ನು ನಿಲ್ಲಿಸುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಯಿರುತ್ತದೆ.
ಈ ಸ್ಥಳದಲ್ಲಿ ಪ್ರತಿ ದಿನ ಕರ್ತವ್ಯ ನಿರ್ವಹಿಸುವ ಸಂಚಾರ ಪೊಲೀಸರು ಈ ಸಮಸ್ಯೆಯನ್ನು ಕಂಡೂ ಕಾಣದಂತೆ ಇರುವುದು ಬೇಸರದ ಸಂಗತಿಯಾಗಿದೆ.
ಮೈಸೂರು ನಗರದ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಮತ್ತು ಮೈಸೂರು ನಗರದ ಪೊಲೀಸ್ ಆಯುಕ್ತರು ಬಸ್ ನಿಲ್ದಾಣದಲ್ಲಿಯೇ ಬಸ್ಗಳನ್ನು ಕಡ್ಡಾಯವಾಗಿ ನಿಲುಗಡೆ ಮಾಡುವಂತೆ ಸಾರಿಗೆ ನಿಗಮದ ಬಸ್ ಚಾಲಕರಿಗೆ ಸೂಕ್ತ ನಿರ್ದೇಶನ ನೀಡಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…