ಓದುಗರ ಪತ್ರ
ಬಸ್ ತಂಗುದಾಣದ ಮುಂಭಾಗ ಪ್ರಯಾಣಿಕರು ನಿಂತಿದ್ದರೂ ತಂಗುದಾಣದ ಮುಂದೆ ಕೆಎಸ್ಆರ್ಟಿಸಿ ಬಸ್ಗಳು ನಿಲುಗಡೆ ನೀಡದೆ ಮುಂದೆ ಹೋಗಿ ನಿಲುಗಡೆ ನೀಡುತ್ತಿದ್ದು, ಪ್ರಯಾಣಿಕರು ಓಡಿ ಹೋಗಿ ಬಸ್ ಹತ್ತಬೇಕಾದ ಪರಿಸ್ಥಿತಿ ಇಂದಿಗೂ ಮುಂದುವರಿಯುತ್ತಿದೆ.
ನಾನು ವಿದ್ಯಾರ್ಥಿಯಾದಗಿನಿಂದಲೂ (೪೦ ವರ್ಷಗಳ ಹಿಂದೆ) ಈ ಸಮಸ್ಯೆ ಇದೆ. ಅದು ಈಗಲೂ ಮುಂದುವರಿಯುತ್ತಿರುವುದು ಶೋಚನೀಯ. ಹಲವಾರು ಬಾರಿ ನಾನು ಗಮನಿಸಿದ ಹಾಗೆ ಕೆಲವು ಬಸ್ ಚಾಲಕರು, ಪ್ರಯಾಣಿಕರು ಓಡಿ ಬಂದೇ ಬಸ್ ಹತ್ತಲಿ ಎಂದು ತಂಗುದಾಣದ ಎದುರು ಬಸ್ ನಿಲುಗಡೆ ನೀಡದೆ, ಮುಂದೆಲ್ಲೋ ನಿಲುಗಡೆ ನೀಡುತ್ತಾರೆ. ಇದರಿಂದಾಗಿ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಕಷ್ಟ ಪಟ್ಟು ಬಸ್ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲ ಬಸ್ ಚಾಲಕರು ರಾತ್ರಿ ವೇಳೆ ನಿಗದಿತ ಮಾರ್ಗದಲ್ಲಿ ಸಂಚರಿಸದೇ ಬದಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಇದರಿಂದಾಗಿ ನಿಗದಿತ ರಸ್ತೆಯಲ್ಲಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ಸಾರಿಗೆ ಇಲಾಖೆಯ ಅಧಿಕಾರಿಗಳು ಇಂತಹ ಸೂಕ್ಷ ವಿಚಾರಗಳ ಬಗ್ಗೆ ಗಮನಹರಿಸಿ, ಬಸ್ ತಂಗುದಾಣಗಳ ಮುಂದೆಯೇ ಬಸ್ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚಿಸಬೇಕಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…