Andolana originals

ಓದುಗರ ಪತ್ರ: ತಂಗುದಾಣಗಳ ಬಳಿ ಬಸ್ ನಿಲ್ಲಿಸಲಿ

ಬಸ್ ತಂಗುದಾಣದ ಮುಂಭಾಗ ಪ್ರಯಾಣಿಕರು ನಿಂತಿದ್ದರೂ ತಂಗುದಾಣದ ಮುಂದೆ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲುಗಡೆ ನೀಡದೆ ಮುಂದೆ ಹೋಗಿ ನಿಲುಗಡೆ ನೀಡುತ್ತಿದ್ದು, ಪ್ರಯಾಣಿಕರು ಓಡಿ ಹೋಗಿ ಬಸ್ ಹತ್ತಬೇಕಾದ ಪರಿಸ್ಥಿತಿ ಇಂದಿಗೂ ಮುಂದುವರಿಯುತ್ತಿದೆ.

ನಾನು ವಿದ್ಯಾರ್ಥಿಯಾದಗಿನಿಂದಲೂ (೪೦ ವರ್ಷಗಳ ಹಿಂದೆ) ಈ ಸಮಸ್ಯೆ ಇದೆ. ಅದು ಈಗಲೂ ಮುಂದುವರಿಯುತ್ತಿರುವುದು ಶೋಚನೀಯ. ಹಲವಾರು ಬಾರಿ ನಾನು ಗಮನಿಸಿದ ಹಾಗೆ ಕೆಲವು ಬಸ್ ಚಾಲಕರು, ಪ್ರಯಾಣಿಕರು ಓಡಿ ಬಂದೇ ಬಸ್ ಹತ್ತಲಿ ಎಂದು ತಂಗುದಾಣದ ಎದುರು ಬಸ್ ನಿಲುಗಡೆ ನೀಡದೆ, ಮುಂದೆಲ್ಲೋ ನಿಲುಗಡೆ ನೀಡುತ್ತಾರೆ. ಇದರಿಂದಾಗಿ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಕಷ್ಟ ಪಟ್ಟು ಬಸ್ ಹತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲ ಬಸ್ ಚಾಲಕರು ರಾತ್ರಿ ವೇಳೆ ನಿಗದಿತ ಮಾರ್ಗದಲ್ಲಿ ಸಂಚರಿಸದೇ ಬದಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಇದರಿಂದಾಗಿ ನಿಗದಿತ ರಸ್ತೆಯಲ್ಲಿ ಬಸ್ಸಿಗಾಗಿ ಕಾಯುವ ಪ್ರಯಾಣಿಕರು ಸಂಕಷ್ಟ ಎದುರಿಸುವಂತಾಗಿದೆ. ಆದ್ದರಿಂದ ಸಾರಿಗೆ ಇಲಾಖೆಯ ಅಧಿಕಾರಿಗಳು ಇಂತಹ ಸೂಕ್ಷ  ವಿಚಾರಗಳ ಬಗ್ಗೆ ಗಮನಹರಿಸಿ, ಬಸ್ ತಂಗುದಾಣಗಳ ಮುಂದೆಯೇ ಬಸ್ ನಿಲುಗಡೆ ನೀಡುವಂತೆ ಚಾಲಕರಿಗೆ ಸೂಚಿಸಬೇಕಿದೆ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago