Andolana originals

ಓದುಗರ ಪತ್ರ: ಜಾತಿಗಣತಿ ಪಾರದರ್ಶಕವಾಗಿರಲಿ

ಜಾತಿ ಗಣತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ ಈ ಜಾತಿ ಗಣತಿ ಪಾರದರ್ಶಕವಾಗಿ ನಡೆದಿದೆಯೇ ಎಂಬುದರ ಬಗ್ಗೆಯೇ ಸಾರ್ವಜನಿಕರಲ್ಲಿ ಅನುಮಾನ ಇದೆ. ಎಂಟು ವರ್ಷಗಳ ಹಿಂದೆ, ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಿರುವುದಾಗಿ ಸರ್ಕಾರ ಹೇಳುತ್ತಿದೆ, ನನಗೆ ತಿಳಿದಿರುವಂತೆ ನಮ್ಮ ಬೀದಿಗಾಗಲಿ, ನಮ್ಮಮನೆಗಾಗಲಿ ಯಾವ ಅಧಿಕಾರಿಗಳೂ ಬಂದು ಸಮೀಕ್ಷೆ ನಡೆಸಿಲ್ಲ.

ಸಮೀಕ್ಷೆ ನಡೆಸುವವರು ಬಂದಾಗ, ನಾವು ಊರಿನಲ್ಲಿ ಇಲ್ಲದೇ ಇರಬಹುದೆಂದು ನಮ್ಮ ಅಕ್ಕ- ಪಕ್ಕದ ಮನೆಯವರನ್ನು ಜಾತಿ ಸಮೀಕ್ಷೆ ಮಾಡುವವರು ಯಾರಾದರೂ ಮನೆ ಬಳಿ ಬಂದಿದ್ದರಾ ಎಂದು ವಿಚಾರಿಸಿದರೆ ಇಲ್ಲ ಎನ್ನುತ್ತಾರೆ. ಹಾಗಿದ್ದ ಮೇಲೆ ಜಾತಿ ಸಮೀಕ್ಷೆ ಮಾಡಿರುವುರುವುದಾದರೂ ಎಲ್ಲಿ? ಇಷ್ಟು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಜಾತಿ ಗಣತಿ ವರದಿಯನ್ನು ಈಗ ದಿಢೀರನೇ ಮುನ್ನೆಲೆಗೆ ತರುವುದರ ಹಿಂದಿನ ಉದ್ದೇಶವೇನು? ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜಾತಿ ಜನಗಣತಿಯನ್ನು ಮುನ್ನೆಲೆಗೆ ತರುತ್ತಿದ್ದಾರೆ ಎಂಬ ಆರೋಪವು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಎಲ್ಲೋ, ಎ.ಸಿ. ರೂಂನಲ್ಲಿ ಕುಳಿತು ಮಾಡಿರುವ ಈ ಜಾತಿ ಗಣತಿಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಈಗ ನಡೆದಿರುವ ‘ಜಾತಿಗಣತಿ’ಯನ್ನು ಪರಿಗಣಿಸಬಾರದೆಂಬ ಒತ್ತಾಯವನ್ನು ವಿರೋಧ ಪಕ್ಷಗಳು ಹಾಗೂ ಆಡಳಿತ ಪಕ್ಷದ ಕೆಲವು ಸದಸ್ಯರು ತೋರುತ್ತಿದ್ದು, ಹೊಸದಾಗಿ ನಿಖರವಾಗಿ ಜಾತಿಗಣತಿ ನಡೆಯುವಂತಾಗಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

5 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

6 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

8 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

8 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

9 hours ago