ಓದುಗರ ಪತ್ರ
ಜಾತಿ ಗಣತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ ಈ ಜಾತಿ ಗಣತಿ ಪಾರದರ್ಶಕವಾಗಿ ನಡೆದಿದೆಯೇ ಎಂಬುದರ ಬಗ್ಗೆಯೇ ಸಾರ್ವಜನಿಕರಲ್ಲಿ ಅನುಮಾನ ಇದೆ. ಎಂಟು ವರ್ಷಗಳ ಹಿಂದೆ, ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಿರುವುದಾಗಿ ಸರ್ಕಾರ ಹೇಳುತ್ತಿದೆ, ನನಗೆ ತಿಳಿದಿರುವಂತೆ ನಮ್ಮ ಬೀದಿಗಾಗಲಿ, ನಮ್ಮಮನೆಗಾಗಲಿ ಯಾವ ಅಧಿಕಾರಿಗಳೂ ಬಂದು ಸಮೀಕ್ಷೆ ನಡೆಸಿಲ್ಲ.
ಸಮೀಕ್ಷೆ ನಡೆಸುವವರು ಬಂದಾಗ, ನಾವು ಊರಿನಲ್ಲಿ ಇಲ್ಲದೇ ಇರಬಹುದೆಂದು ನಮ್ಮ ಅಕ್ಕ- ಪಕ್ಕದ ಮನೆಯವರನ್ನು ಜಾತಿ ಸಮೀಕ್ಷೆ ಮಾಡುವವರು ಯಾರಾದರೂ ಮನೆ ಬಳಿ ಬಂದಿದ್ದರಾ ಎಂದು ವಿಚಾರಿಸಿದರೆ ಇಲ್ಲ ಎನ್ನುತ್ತಾರೆ. ಹಾಗಿದ್ದ ಮೇಲೆ ಜಾತಿ ಸಮೀಕ್ಷೆ ಮಾಡಿರುವುರುವುದಾದರೂ ಎಲ್ಲಿ? ಇಷ್ಟು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಜಾತಿ ಗಣತಿ ವರದಿಯನ್ನು ಈಗ ದಿಢೀರನೇ ಮುನ್ನೆಲೆಗೆ ತರುವುದರ ಹಿಂದಿನ ಉದ್ದೇಶವೇನು? ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜಾತಿ ಜನಗಣತಿಯನ್ನು ಮುನ್ನೆಲೆಗೆ ತರುತ್ತಿದ್ದಾರೆ ಎಂಬ ಆರೋಪವು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಎಲ್ಲೋ, ಎ.ಸಿ. ರೂಂನಲ್ಲಿ ಕುಳಿತು ಮಾಡಿರುವ ಈ ಜಾತಿ ಗಣತಿಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಈಗ ನಡೆದಿರುವ ‘ಜಾತಿಗಣತಿ’ಯನ್ನು ಪರಿಗಣಿಸಬಾರದೆಂಬ ಒತ್ತಾಯವನ್ನು ವಿರೋಧ ಪಕ್ಷಗಳು ಹಾಗೂ ಆಡಳಿತ ಪಕ್ಷದ ಕೆಲವು ಸದಸ್ಯರು ತೋರುತ್ತಿದ್ದು, ಹೊಸದಾಗಿ ನಿಖರವಾಗಿ ಜಾತಿಗಣತಿ ನಡೆಯುವಂತಾಗಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…