ಓದುಗರ ಪತ್ರ
ಜಾತಿ ಗಣತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ ಈ ಜಾತಿ ಗಣತಿ ಪಾರದರ್ಶಕವಾಗಿ ನಡೆದಿದೆಯೇ ಎಂಬುದರ ಬಗ್ಗೆಯೇ ಸಾರ್ವಜನಿಕರಲ್ಲಿ ಅನುಮಾನ ಇದೆ. ಎಂಟು ವರ್ಷಗಳ ಹಿಂದೆ, ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಿರುವುದಾಗಿ ಸರ್ಕಾರ ಹೇಳುತ್ತಿದೆ, ನನಗೆ ತಿಳಿದಿರುವಂತೆ ನಮ್ಮ ಬೀದಿಗಾಗಲಿ, ನಮ್ಮಮನೆಗಾಗಲಿ ಯಾವ ಅಧಿಕಾರಿಗಳೂ ಬಂದು ಸಮೀಕ್ಷೆ ನಡೆಸಿಲ್ಲ.
ಸಮೀಕ್ಷೆ ನಡೆಸುವವರು ಬಂದಾಗ, ನಾವು ಊರಿನಲ್ಲಿ ಇಲ್ಲದೇ ಇರಬಹುದೆಂದು ನಮ್ಮ ಅಕ್ಕ- ಪಕ್ಕದ ಮನೆಯವರನ್ನು ಜಾತಿ ಸಮೀಕ್ಷೆ ಮಾಡುವವರು ಯಾರಾದರೂ ಮನೆ ಬಳಿ ಬಂದಿದ್ದರಾ ಎಂದು ವಿಚಾರಿಸಿದರೆ ಇಲ್ಲ ಎನ್ನುತ್ತಾರೆ. ಹಾಗಿದ್ದ ಮೇಲೆ ಜಾತಿ ಸಮೀಕ್ಷೆ ಮಾಡಿರುವುರುವುದಾದರೂ ಎಲ್ಲಿ? ಇಷ್ಟು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಜಾತಿ ಗಣತಿ ವರದಿಯನ್ನು ಈಗ ದಿಢೀರನೇ ಮುನ್ನೆಲೆಗೆ ತರುವುದರ ಹಿಂದಿನ ಉದ್ದೇಶವೇನು? ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜಾತಿ ಜನಗಣತಿಯನ್ನು ಮುನ್ನೆಲೆಗೆ ತರುತ್ತಿದ್ದಾರೆ ಎಂಬ ಆರೋಪವು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಎಲ್ಲೋ, ಎ.ಸಿ. ರೂಂನಲ್ಲಿ ಕುಳಿತು ಮಾಡಿರುವ ಈ ಜಾತಿ ಗಣತಿಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಈಗ ನಡೆದಿರುವ ‘ಜಾತಿಗಣತಿ’ಯನ್ನು ಪರಿಗಣಿಸಬಾರದೆಂಬ ಒತ್ತಾಯವನ್ನು ವಿರೋಧ ಪಕ್ಷಗಳು ಹಾಗೂ ಆಡಳಿತ ಪಕ್ಷದ ಕೆಲವು ಸದಸ್ಯರು ತೋರುತ್ತಿದ್ದು, ಹೊಸದಾಗಿ ನಿಖರವಾಗಿ ಜಾತಿಗಣತಿ ನಡೆಯುವಂತಾಗಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…