ಓದುಗರ ಪತ್ರ
ಜಾತಿ ಗಣತಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ ಈ ಜಾತಿ ಗಣತಿ ಪಾರದರ್ಶಕವಾಗಿ ನಡೆದಿದೆಯೇ ಎಂಬುದರ ಬಗ್ಗೆಯೇ ಸಾರ್ವಜನಿಕರಲ್ಲಿ ಅನುಮಾನ ಇದೆ. ಎಂಟು ವರ್ಷಗಳ ಹಿಂದೆ, ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಿರುವುದಾಗಿ ಸರ್ಕಾರ ಹೇಳುತ್ತಿದೆ, ನನಗೆ ತಿಳಿದಿರುವಂತೆ ನಮ್ಮ ಬೀದಿಗಾಗಲಿ, ನಮ್ಮಮನೆಗಾಗಲಿ ಯಾವ ಅಧಿಕಾರಿಗಳೂ ಬಂದು ಸಮೀಕ್ಷೆ ನಡೆಸಿಲ್ಲ.
ಸಮೀಕ್ಷೆ ನಡೆಸುವವರು ಬಂದಾಗ, ನಾವು ಊರಿನಲ್ಲಿ ಇಲ್ಲದೇ ಇರಬಹುದೆಂದು ನಮ್ಮ ಅಕ್ಕ- ಪಕ್ಕದ ಮನೆಯವರನ್ನು ಜಾತಿ ಸಮೀಕ್ಷೆ ಮಾಡುವವರು ಯಾರಾದರೂ ಮನೆ ಬಳಿ ಬಂದಿದ್ದರಾ ಎಂದು ವಿಚಾರಿಸಿದರೆ ಇಲ್ಲ ಎನ್ನುತ್ತಾರೆ. ಹಾಗಿದ್ದ ಮೇಲೆ ಜಾತಿ ಸಮೀಕ್ಷೆ ಮಾಡಿರುವುರುವುದಾದರೂ ಎಲ್ಲಿ? ಇಷ್ಟು ವರ್ಷಗಳಿಂದಲೂ ನನೆಗುದಿಗೆ ಬಿದ್ದಿದ್ದ ಜಾತಿ ಗಣತಿ ವರದಿಯನ್ನು ಈಗ ದಿಢೀರನೇ ಮುನ್ನೆಲೆಗೆ ತರುವುದರ ಹಿಂದಿನ ಉದ್ದೇಶವೇನು? ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜಾತಿ ಜನಗಣತಿಯನ್ನು ಮುನ್ನೆಲೆಗೆ ತರುತ್ತಿದ್ದಾರೆ ಎಂಬ ಆರೋಪವು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಎಲ್ಲೋ, ಎ.ಸಿ. ರೂಂನಲ್ಲಿ ಕುಳಿತು ಮಾಡಿರುವ ಈ ಜಾತಿ ಗಣತಿಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಈಗ ನಡೆದಿರುವ ‘ಜಾತಿಗಣತಿ’ಯನ್ನು ಪರಿಗಣಿಸಬಾರದೆಂಬ ಒತ್ತಾಯವನ್ನು ವಿರೋಧ ಪಕ್ಷಗಳು ಹಾಗೂ ಆಡಳಿತ ಪಕ್ಷದ ಕೆಲವು ಸದಸ್ಯರು ತೋರುತ್ತಿದ್ದು, ಹೊಸದಾಗಿ ನಿಖರವಾಗಿ ಜಾತಿಗಣತಿ ನಡೆಯುವಂತಾಗಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…