ಓದುಗರ ಪತ್ರ
ತಿರುಪತಿ-ಚಾಮರಾಜನಗರ ಎಕ್ಸ್ಪ್ರೆಸ್ (೧೬೨೨೦) ರೈಲು ಕಳೆದ ಆರು ತಿಂಗಳಿನಿಂದ ನಿರಂತರವಾಗಿ ತಡವಾಗಿ ಸಂಚರಿಸುತ್ತಿದ್ದು, ಇದರಿಂದ ಮೈಸೂರು-ನಂಜನಗೂಡು -ಚಾಮರಾಜನಗರ ಮಾರ್ಗವಾಗಿ ಪ್ರಯಾಣಿಸುವ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ. ರೈಲು ಸಕಾಲಕ್ಕೆ ತಲುಪದೇ ಇರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ.
ರೈಲು ತಡವಾಗಿ ಚಲಿಸುತ್ತಿರುವ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ರೈಲ್ವೆ ಇಲಾಖೆ ಈ ಸಮಸ್ಯೆಯನ್ನು ತಕ್ಷಣ ಗಂಭೀರವಾಗಿ ಪರಿಗಣಿಸಿ, ರೈಲಿನ ವೇಳಾಪಟ್ಟಿಯನ್ನು ಸುಧಾರಿಸುವ ಜೊತೆಗೆ ಹಿಂದಿನಂತೆ ಪರ್ಯಾಯ ರೈಲು ಸೇವೆಯನ್ನು ಮರುಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು.
-ಲೋಕೇಶ್, ಬಸವನಗುಡಿ ಬ್ಲಾಕ್, ನಂಜನಗೂಡು
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…