ಓದುಗರ ಪತ್ರ
ಪ್ರತಿ ವರ್ಷದಂತೆ ಈ ವರ್ಷವೂ ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಬೀಜ ತಯಾರಿಸುವ ಕಂಪೆನಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡಿದ್ದು, ರೈತರಿಗೆ ನಷ್ಟ ಉಂಟಾಗಿದೆ. ಆದ್ದರಿಂದ ಕಂಪೆನಿಗಳಿಂದಲೇ ಪರಿಹಾರ ವಸೂಲಿ ಮಾಡಿ, ನಷ್ಟ ಅನುಭವಿಸಿದ ರೈತರಿಗೆ ನೀಡಬೇಕು ಎಂದು ತಿ.ನರಸೀಪುರ ರಾಜ್ಯ ರೈತ ಸಂಘದ ತಾಲ್ಲೂಕು ಘಟಕ ಆಗ್ರಹಿಸಿರುವುದು ಸ್ವಾಗತಾರ್ಹ.
ಕೃಷಿ ಇಲಾಖೆಯು ವಿತರಿಸುವ ಮುಸುಕಿನ ಜೋಳ ಬಿತ್ತನೆ ಬೀಜದ ಪ್ಯಾಕೆಟ್ ಒಂದರಲ್ಲಿ ೪ ಕೆಜಿ ಬಿತ್ತನೆ ಬೀಜ ಇದ್ದು ೬೦೦ ರೂ. ಪಡೆಯುತ್ತಾರೆ. ಒಂದು ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ೧೫ ಸಾವಿರ ಪಡೆಯುವ ಕೃಷಿ ಇಲಾಖೆ ರೈತರಿಂದ ಒಂದು ಕ್ವಿಂಟಾಲ್ ಮುಸುಕಿನ ಜೋಳವನ್ನು ಕೇವಲ ೨೦೦ ರೂ.ಗಳಿಂದ ೨,೫೦೦ ರೂ. ನೀಡಿ ಖರೀದಿಸುತ್ತದೆ. ಈ ಹಿಂದೆ ರೈತರು ತಾವು ಬೆಳೆದ ಫಸಲನ್ನು ಎಷ್ಟು ಬೇಕೋ ಅಷ್ಟೇ ಮಾರಾಟ ಮಾಡಿ, ಉಳಿದದ್ದನ್ನು ತಾವೇ ಬಿತ್ತನೆ ಮಾಡಲು ಉಪಯೋಗಿಸಿಕೊಳ್ಳುತ್ತಿದ್ದರು, ಈಗ ಅದೇ ಪದ್ಧತಿಯನ್ನು ಅನುಸರಿಸಿದರೆ ಮಾತ್ರ ರೈತ ಬದುಕಲು ಸಾಧ್ಯ ಎಂದು ರಾಜ್ಯ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಂಕರ್ ಅವರು ಕಿವಿಮಾತು ಹೇಳಿರುವುದು ಸಮಂಜಸವಾಗಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…