ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯದ ಒಡೆತನದಲ್ಲಿರುವ ಕುಕ್ಕರಹಳ್ಳಿ ಕೆರೆ ಪರಿಸರದಲ್ಲಿ ವಾಯುವಿಹಾರ ಮಾಡುವುದಕ್ಕೆ ಪ್ರತಿದಿನ ನೂರಾರು ಜನರು ಬರುತ್ತಾರೆ. ಕೆಲವು ವಿಶೇಷ ದಿನಗಳಲ್ಲಿ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ನಡುವೆ ಮುಂಜಾನೆ ೫.೩೦ರ ವೇಳೆ ಕುಕ್ಕರಹಳ್ಳಿ ಕೆರೆಯ ಬಾಗಿಲುಗಳು ತೆರೆಯುತ್ತವೆ. ಈ ಸಮಯದಲ್ಲಿ ಮತ್ತು ಸಂಜೆ ೫.೪೦ರ ಸಮಯಗಳಲ್ಲಿ ಕುಕ್ಕರಹಳ್ಳಿ ಕೆರೆಯ ಕೆಲ ಭಾಗ ಗಳಲ್ಲಿ ಕತ್ತಲಾವರಿಸುತ್ತದೆ. ಆದ್ದರಿಂದ ಸಂಬಂಧಪಟ್ಟ ಮೈಸೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಕುಕ್ಕರಹಳ್ಳಿ ಕೆರೆಯ ಸಂರಕ್ಷಣೆ ಮತ್ತು ಸಾರ್ವಜನಿಕರ ಹಿತಕ್ಕಾಗಿ ಕೆರೆಯಲ್ಲಿರುವ ವಿದ್ಯುತ್ ಕಂಬಗಳಿಗೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಹಾಗೂ ಕೆರೆಯಲ್ಲಿರುವ ಕೆಲ ವಿದ್ಯುತ್ ಕಂಬಗಳಲ್ಲಿ ದೀಪಗಳಿದ್ದರೂ ಬೆಳಗುತ್ತಿಲ್ಲ. ಸಂಬಂಧಪಟ್ಟವರು ಕೂಡಲೇ ಕುಕ್ಕರಹಳ್ಳಿ ಕೆರೆಯ ಬಳಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…