ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯದ ಒಡೆತನದಲ್ಲಿರುವ ಕುಕ್ಕರಹಳ್ಳಿ ಕೆರೆ ಪರಿಸರದಲ್ಲಿ ವಾಯುವಿಹಾರ ಮಾಡುವುದಕ್ಕೆ ಪ್ರತಿದಿನ ನೂರಾರು ಜನರು ಬರುತ್ತಾರೆ. ಕೆಲವು ವಿಶೇಷ ದಿನಗಳಲ್ಲಿ ಮತ್ತು ಸರ್ಕಾರಿ ರಜೆ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಈ ನಡುವೆ ಮುಂಜಾನೆ ೫.೩೦ರ ವೇಳೆ ಕುಕ್ಕರಹಳ್ಳಿ ಕೆರೆಯ ಬಾಗಿಲುಗಳು ತೆರೆಯುತ್ತವೆ. ಈ ಸಮಯದಲ್ಲಿ ಮತ್ತು ಸಂಜೆ ೫.೪೦ರ ಸಮಯಗಳಲ್ಲಿ ಕುಕ್ಕರಹಳ್ಳಿ ಕೆರೆಯ ಕೆಲ ಭಾಗ ಗಳಲ್ಲಿ ಕತ್ತಲಾವರಿಸುತ್ತದೆ. ಆದ್ದರಿಂದ ಸಂಬಂಧಪಟ್ಟ ಮೈಸೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳು ಕುಕ್ಕರಹಳ್ಳಿ ಕೆರೆಯ ಸಂರಕ್ಷಣೆ ಮತ್ತು ಸಾರ್ವಜನಿಕರ ಹಿತಕ್ಕಾಗಿ ಕೆರೆಯಲ್ಲಿರುವ ವಿದ್ಯುತ್ ಕಂಬಗಳಿಗೆ ವಿದ್ಯುತ್ ದೀಪಗಳನ್ನು ಅಳವಡಿಸಬೇಕು ಹಾಗೂ ಕೆರೆಯಲ್ಲಿರುವ ಕೆಲ ವಿದ್ಯುತ್ ಕಂಬಗಳಲ್ಲಿ ದೀಪಗಳಿದ್ದರೂ ಬೆಳಗುತ್ತಿಲ್ಲ. ಸಂಬಂಧಪಟ್ಟವರು ಕೂಡಲೇ ಕುಕ್ಕರಹಳ್ಳಿ ಕೆರೆಯ ಬಳಿ ವಿದ್ಯುತ್ ದೀಪದ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…