ಓದುಗರ ಪತ್ರ
ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳುಗಳಿಂದ ಮಹಿಳೆಯರ ಖಾತೆಗೆ ತಲುಪಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ‘ಗೃಹ ಲಕ್ಷ್ಮೀ ಯೋಜನೆ ಏನು ಮಹಿಳೆಯರಿಗೆ ಪ್ರತಿ ತಿಂಗಳು ಸಂಬಳ ಕೊಡುವ ಯೋಜನೆ ಅಲ್ಲವಲ್ಲ’ ಎಂದು ರಾಜ್ಯದ ಇಂಧನ ಸಚಿವ ಕೆ.ಜೆ. ಜಾರ್ಜ್ ಉತ್ತರಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣೆಯ ವೇಳೆ ೫ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಆ ಪೈಕಿ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ೨,೦೦೦ ರೂ. ಮತ್ತು ಅನ್ನಭಾಗ್ಯ ಯೋಜನೆಯಡಿ ೫ ಕೆ.ಜಿ. ಅಕ್ಕಿಯ ಬದಲಾಗಿ ಹಣವನ್ನು ನೀಡುತ್ತಿತ್ತು. ಆದರೆ, ಕಳೆದ ಮೂರು ತಿಂಗಳುಗಳಿಂದ ಈ ಹಣ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಈ ಬಗ್ಗೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸಚಿವರು ಈ ರೀತಿ ಉಡಾಫೆ ಉತ್ತರ ನೀಡಿರುವುದು ಸರಿಯಲ್ಲ.
ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯಂತೆ ನಡೆದುಕೊಳ್ಳದೆ, ಅಧಿಕಾರಕ್ಕೆ ಬಂದ ಬಳಿಕ ಈಗ ಅದೇನು ಪ್ರತಿ ತಿಂಗಳು ನೀಡುವ ಸರ್ಕಾರಿ ಸಂಬಳವೇ ಎಂದು ಹೇಳುವುದು ಎಷ್ಟು ಸರಿ? ಯಾರೂ ಕೂಡ ನಮಗೆ ಮಾಸಿಕ ಎರಡು ಸಾವಿರ ರೂ. ನೀಡಿ ಎಂದು ಕೇಳಿಲ್ಲ. ಅಧಿಕಾರಕ್ಕೇರುವ ಸಲುವಾಗಿ, ನೀವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಈಗ ಅವುಗಳನ್ನು ಸರಿಯಾಗಿ ಕಾರ್ಯರೂಪಕ್ಕೆ ತರದೆ ನಮ್ಮದು ನುಡಿದಂತೆ ನಡೆಯುವ ಸರ್ಕಾರ ಎಂದುಕೊಳ್ಳುವುದು ಸರಿಯಲ್ಲ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…