ಓದುಗರ ಪತ್ರ
ವರದಿಗಳ ಪ್ರಕಾರ ಸಾರ್ವಜನಿಕ ಗ್ರಂಥಾಲಯಗಳಲ್ಲಿ, ಕಳೆದ ನಾಲ್ಕು ವರ್ಷಗಳಿಂದ ಹೊಸ ಸಾಹಿತ್ಯ ಕೃತಿಗಳ ಖರೀದಿಯೇ ನಡೆದಿಲ್ಲ ಎಂಬುದು ಆತಂಕಕಾರಿ. ಸ್ಥಳೀಯ ಸಂಸ್ಥೆಗಳಿಂದ ಬರ ಬೇಕಾದ ಅಂದಾಜು ೫೨೬.೮೩ ಕೋಟಿ ರೂ. ಗ್ರಂಥಾಲಯ ತೆರಿಗೆಯನ್ನು ವಸೂಲಿ ಮಾಡಲು ಸಾಧ್ಯವಾಗದ ಆಡಳಿತ ಯಂತ್ರದ ವೈಫಲ್ಯ ಎದ್ದು ಕಾಣುತ್ತಿದೆ. ಬಿಬಿಎಂಪಿಯಂತಹ ಸಂಸ್ಥೆಗಳೇ ೪೬೧ ಕೋಟಿ ರೂ.ಗೂ ಅಧಿಕ ಹಣ ಬಾಕಿ ಉಳಿಸಿಕೊಂಡಿರುವುದು ವ್ಯವಸ್ಥೆಯ ದುರಂತ. ಪ್ರಕಾಶಕರಿಗೆ ಪಾವತಿಸಬೇಕಾದ ೮ ಕೋಟಿ ರೂ. ಬಾಕಿ ಹಣ ನೀಡದೆ ಅವರನ್ನು ಬೀದಿಗೆ ತಳ್ಳಲಾಗುತ್ತಿದೆ. ಡಿಜಿಟಲ್ ಲೈಬ್ರರಿ ಎಂಬ ಆಕರ್ಷಕ ಪದಗಳ ಹಿಂದೆ ಹಳ್ಳಿಗಳ ಗ್ರಂಥಾಲಯಗಳಲ್ಲಿ ಕನಿಷ್ಠ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲದಿರುವುದು ಅಕ್ಷಮ್ಯ. ರಾಜ್ಯ ಸರ್ಕಾರ ಕೂಡಲೇ ಈ ಆರ್ಥಿಕ ಬಿಕ್ಕಟ್ಟನ್ನು ನೀಗಿಸಿ, ಬಾಕಿ ತೆರಿಗೆಯನ್ನು ಕಡ್ಡಾಯವಾಗಿ ವಸೂಲಿ ಮಾಡಬೇಕು. ಪುಸ್ತಕ ಸಂಸ್ಕೃತಿಯನ್ನು ಕೊಲ್ಲುತ್ತಿರುವ ಈ ಆಡಳಿತಾತ್ಮಕ ಮಂದಗತಿಯ ಧೋರಣೆಯನ್ನು ಕೂಡಲೇ ಕೈಬಿಡಬೇಕು.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು…
ವಿಶ್ವ ವಿಖ್ಯಾತಿ ಹೊಂದಿರುವ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನಕ್ಕೆ ರಾಜ್ಯ, ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ,…
ಸಾವಿರಾರು ಮಂದಿ ಭಕ್ತರು ಭಾಗಿ: ವಿವಿಧ ಸೇವೆಗಳನ್ನು ಸಲ್ಲಿಸಿದ ಭಕ್ತಾದಿಗಳು ಯಳಂದೂರು: ತಾಲ್ಲೂಕಿನ ಐತಿಹಾಸಿಕ ಪುರಾಣ ಪ್ರಸಿದ್ಧ ಬಿಳಿಗಿರಿರಂಗನ ಬೆಟ್ಟದಲ್ಲಿರುವ…
ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ಲಕ್ಷಾಂತರ ಜನರು; ಶಾಸಕರೂ ಸೇರಿದಂತೆ ಗಣ್ಯರು ಭಾಗಿ ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಶ್ರೀರಾಮದೇವರ ರಥೋತ್ಸವ…
ಎಸ್.ಎಸ್.ಭಟ್ ನಂಜನಗೂಡು: ತ್ರಿವಿಧ ದಾಸೋಹಕ್ಕೆ ಹೆಸರಾದ ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕೆಲ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನೇ ನಡೆಸದೆ ನಕಲಿ ಜಿಪಿಎಸ್ ದಾಖಲಾತಿ ಸಲ್ಲಿಸಿದ ಗುತ್ತಿಗೆ ಸಂಸ್ಥೆಯೊಂದು…