ಓದುಗರ ಪತ್ರ
ವರದಿಗಳ ಪ್ರಕಾರ ಸಾರ್ವಜನಿಕ ಗ್ರಂಥಾಲಯಗಳಲ್ಲಿ, ಕಳೆದ ನಾಲ್ಕು ವರ್ಷಗಳಿಂದ ಹೊಸ ಸಾಹಿತ್ಯ ಕೃತಿಗಳ ಖರೀದಿಯೇ ನಡೆದಿಲ್ಲ ಎಂಬುದು ಆತಂಕಕಾರಿ. ಸ್ಥಳೀಯ ಸಂಸ್ಥೆಗಳಿಂದ ಬರ ಬೇಕಾದ ಅಂದಾಜು ೫೨೬.೮೩ ಕೋಟಿ ರೂ. ಗ್ರಂಥಾಲಯ ತೆರಿಗೆಯನ್ನು ವಸೂಲಿ ಮಾಡಲು ಸಾಧ್ಯವಾಗದ ಆಡಳಿತ ಯಂತ್ರದ ವೈಫಲ್ಯ ಎದ್ದು ಕಾಣುತ್ತಿದೆ. ಬಿಬಿಎಂಪಿಯಂತಹ ಸಂಸ್ಥೆಗಳೇ ೪೬೧ ಕೋಟಿ ರೂ.ಗೂ ಅಧಿಕ ಹಣ ಬಾಕಿ ಉಳಿಸಿಕೊಂಡಿರುವುದು ವ್ಯವಸ್ಥೆಯ ದುರಂತ. ಪ್ರಕಾಶಕರಿಗೆ ಪಾವತಿಸಬೇಕಾದ ೮ ಕೋಟಿ ರೂ. ಬಾಕಿ ಹಣ ನೀಡದೆ ಅವರನ್ನು ಬೀದಿಗೆ ತಳ್ಳಲಾಗುತ್ತಿದೆ. ಡಿಜಿಟಲ್ ಲೈಬ್ರರಿ ಎಂಬ ಆಕರ್ಷಕ ಪದಗಳ ಹಿಂದೆ ಹಳ್ಳಿಗಳ ಗ್ರಂಥಾಲಯಗಳಲ್ಲಿ ಕನಿಷ್ಠ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲದಿರುವುದು ಅಕ್ಷಮ್ಯ. ರಾಜ್ಯ ಸರ್ಕಾರ ಕೂಡಲೇ ಈ ಆರ್ಥಿಕ ಬಿಕ್ಕಟ್ಟನ್ನು ನೀಗಿಸಿ, ಬಾಕಿ ತೆರಿಗೆಯನ್ನು ಕಡ್ಡಾಯವಾಗಿ ವಸೂಲಿ ಮಾಡಬೇಕು. ಪುಸ್ತಕ ಸಂಸ್ಕೃತಿಯನ್ನು ಕೊಲ್ಲುತ್ತಿರುವ ಈ ಆಡಳಿತಾತ್ಮಕ ಮಂದಗತಿಯ ಧೋರಣೆಯನ್ನು ಕೂಡಲೇ ಕೈಬಿಡಬೇಕು.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…