Andolana originals

ಓದುಗರ ಪತ್ರ: ರೈತರ ಬೆಳೆಗಳಿಗೆ ಸರ್ಕಾರವೇ ಬೆಲೆ ನಿಗದಿ ಮಾಡಲಿ

ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ ಹೋಲಿಸಿದರೆ ಇಂದಿನ ತರಕಾರಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ತಿಂಗಳ ಹಿಂದೆ ಕೆ.ಜಿ.ಗೆ 40 ರೂ.ಗಳಿದ್ದ ಬೆಂಡೆಕಾಯಿ ಈಗ 20 ರೂ.ಗಳಾಗಿದೆ. ಬದನೆಕಾಯಿ 60 ರೂ. ಇದ್ದದ್ದು ಈಗ 40 ರೂ. ಆಗಿದೆ.

ಹಾಗೆಯೇ ಹಸಿ ಮೆಣಸಿನಕಾಯಿ, ಕ್ಯಾರೆಟ್, ಟೊಮೆಟೋ ಬೆಲೆಗಳೂ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿವೆ. ಹೀಗೆ ತರಕಾರಿ ಬೆಳೆಗಳು ದಿನದಿಂದ ದಿನಕ್ಕೆ ಕುಸಿತವಾಗುತ್ತಿರುವುದರಿಂದ ಒಂದು ನಿರ್ದಿಷ್ಟ ಬೆಲೆ ಸಿಗದೆ ರೈತರು ಕಂಗಾಲಾಗುತ್ತಿದ್ದಾರೆ.

ರೈತರು ಅತಿವೃಷ್ಟಿ, ಅನಾವೃಷ್ಟಿಯ ನಡುವೆಯೂ ಕಷ್ಟಪಟ್ಟು ವ್ಯವಸಾಯ ಮಾಡಿ ಬೆಳೆದ ಬೆಳೆಗಳನ್ನು ಮಧ್ಯವರ್ತಿಗಳ ಹಾವಳಿಯ ನಡುವೆಯೂ ಮಾರುಕಟ್ಟೆಗೆ ತಂದು ಮಾರಾಟ ಮಾಡಿರುತ್ತಾರೆ. ಇಷ್ಟಿದ್ದರೂ ರೈತರಿಗೆ ಸರಿಯಾದ ಬೆಲೆ ಸಿಗದೆ ನಷ್ಟ ಹೊಂದುತ್ತಾರೆ ಎಂದರೆ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸುವುದಾದರೂ ಹೇಗೆ? ರೈತರನ್ನು ಈ ದೇಶದ ಬೆನ್ನೆಲುಬು, ಈ ದೇಶದ ಆಸ್ತಿ ಎಂದೆಲ್ಲ ಮಾತನಾಡುವ ಚುನಾಯಿತ ಪ್ರತಿನಿಧಿಗಳು ರೈತರ ಕಷ್ಟ-ಸುಖಗಳನ್ನು ಎಂದಾದರೂ ಆಲಿಸಿದ್ದಾರೆಯೇ? ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳು, ರಸಗೊಬ್ಬರಗಳನ್ನು ಸಕಾಲಕ್ಕೆ ಪೂರೈಕೆ ಮಾಡಿದ್ದಾರೆಯೇ? ಹೀಗಾದರೆ ರೈತರು ಜೀವನ ಮಾಡುವುದಾದರೂ ಹೇಗೆ? ಆದ್ದರಿಂದ ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನಿಗದಿ ಮಾಡಿ ರೈತರು ನಷ್ಟ ಹೊಂದುವುದನ್ನು ತಪ್ಪಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

34 mins ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

1 hour ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

4 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

12 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

12 hours ago