Andolana originals

ಓದುಗರ ಪತ್ರ: ರೈತರ ಬೆಳೆಗಳಿಗೆ ಸರ್ಕಾರವೇ ಬೆಲೆ ನಿಗದಿ ಮಾಡಲಿ

ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ ಹೋಲಿಸಿದರೆ ಇಂದಿನ ತರಕಾರಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ತಿಂಗಳ ಹಿಂದೆ ಕೆ.ಜಿ.ಗೆ 40 ರೂ.ಗಳಿದ್ದ ಬೆಂಡೆಕಾಯಿ ಈಗ 20 ರೂ.ಗಳಾಗಿದೆ. ಬದನೆಕಾಯಿ 60 ರೂ. ಇದ್ದದ್ದು ಈಗ 40 ರೂ. ಆಗಿದೆ.

ಹಾಗೆಯೇ ಹಸಿ ಮೆಣಸಿನಕಾಯಿ, ಕ್ಯಾರೆಟ್, ಟೊಮೆಟೋ ಬೆಲೆಗಳೂ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿವೆ. ಹೀಗೆ ತರಕಾರಿ ಬೆಳೆಗಳು ದಿನದಿಂದ ದಿನಕ್ಕೆ ಕುಸಿತವಾಗುತ್ತಿರುವುದರಿಂದ ಒಂದು ನಿರ್ದಿಷ್ಟ ಬೆಲೆ ಸಿಗದೆ ರೈತರು ಕಂಗಾಲಾಗುತ್ತಿದ್ದಾರೆ.

ರೈತರು ಅತಿವೃಷ್ಟಿ, ಅನಾವೃಷ್ಟಿಯ ನಡುವೆಯೂ ಕಷ್ಟಪಟ್ಟು ವ್ಯವಸಾಯ ಮಾಡಿ ಬೆಳೆದ ಬೆಳೆಗಳನ್ನು ಮಧ್ಯವರ್ತಿಗಳ ಹಾವಳಿಯ ನಡುವೆಯೂ ಮಾರುಕಟ್ಟೆಗೆ ತಂದು ಮಾರಾಟ ಮಾಡಿರುತ್ತಾರೆ. ಇಷ್ಟಿದ್ದರೂ ರೈತರಿಗೆ ಸರಿಯಾದ ಬೆಲೆ ಸಿಗದೆ ನಷ್ಟ ಹೊಂದುತ್ತಾರೆ ಎಂದರೆ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸುವುದಾದರೂ ಹೇಗೆ? ರೈತರನ್ನು ಈ ದೇಶದ ಬೆನ್ನೆಲುಬು, ಈ ದೇಶದ ಆಸ್ತಿ ಎಂದೆಲ್ಲ ಮಾತನಾಡುವ ಚುನಾಯಿತ ಪ್ರತಿನಿಧಿಗಳು ರೈತರ ಕಷ್ಟ-ಸುಖಗಳನ್ನು ಎಂದಾದರೂ ಆಲಿಸಿದ್ದಾರೆಯೇ? ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳು, ರಸಗೊಬ್ಬರಗಳನ್ನು ಸಕಾಲಕ್ಕೆ ಪೂರೈಕೆ ಮಾಡಿದ್ದಾರೆಯೇ? ಹೀಗಾದರೆ ರೈತರು ಜೀವನ ಮಾಡುವುದಾದರೂ ಹೇಗೆ? ಆದ್ದರಿಂದ ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನಿಗದಿ ಮಾಡಿ ರೈತರು ನಷ್ಟ ಹೊಂದುವುದನ್ನು ತಪ್ಪಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

1 min ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

4 mins ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

5 mins ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

9 mins ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

13 mins ago