Andolana originals

ಓದುಗರ ಪತ್ರ: ರೈತರ ಬೆಳೆಗಳಿಗೆ ಸರ್ಕಾರವೇ ಬೆಲೆ ನಿಗದಿ ಮಾಡಲಿ

ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ ಹೋಲಿಸಿದರೆ ಇಂದಿನ ತರಕಾರಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ತಿಂಗಳ ಹಿಂದೆ ಕೆ.ಜಿ.ಗೆ 40 ರೂ.ಗಳಿದ್ದ ಬೆಂಡೆಕಾಯಿ ಈಗ 20 ರೂ.ಗಳಾಗಿದೆ. ಬದನೆಕಾಯಿ 60 ರೂ. ಇದ್ದದ್ದು ಈಗ 40 ರೂ. ಆಗಿದೆ.

ಹಾಗೆಯೇ ಹಸಿ ಮೆಣಸಿನಕಾಯಿ, ಕ್ಯಾರೆಟ್, ಟೊಮೆಟೋ ಬೆಲೆಗಳೂ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿವೆ. ಹೀಗೆ ತರಕಾರಿ ಬೆಳೆಗಳು ದಿನದಿಂದ ದಿನಕ್ಕೆ ಕುಸಿತವಾಗುತ್ತಿರುವುದರಿಂದ ಒಂದು ನಿರ್ದಿಷ್ಟ ಬೆಲೆ ಸಿಗದೆ ರೈತರು ಕಂಗಾಲಾಗುತ್ತಿದ್ದಾರೆ.

ರೈತರು ಅತಿವೃಷ್ಟಿ, ಅನಾವೃಷ್ಟಿಯ ನಡುವೆಯೂ ಕಷ್ಟಪಟ್ಟು ವ್ಯವಸಾಯ ಮಾಡಿ ಬೆಳೆದ ಬೆಳೆಗಳನ್ನು ಮಧ್ಯವರ್ತಿಗಳ ಹಾವಳಿಯ ನಡುವೆಯೂ ಮಾರುಕಟ್ಟೆಗೆ ತಂದು ಮಾರಾಟ ಮಾಡಿರುತ್ತಾರೆ. ಇಷ್ಟಿದ್ದರೂ ರೈತರಿಗೆ ಸರಿಯಾದ ಬೆಲೆ ಸಿಗದೆ ನಷ್ಟ ಹೊಂದುತ್ತಾರೆ ಎಂದರೆ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸುವುದಾದರೂ ಹೇಗೆ? ರೈತರನ್ನು ಈ ದೇಶದ ಬೆನ್ನೆಲುಬು, ಈ ದೇಶದ ಆಸ್ತಿ ಎಂದೆಲ್ಲ ಮಾತನಾಡುವ ಚುನಾಯಿತ ಪ್ರತಿನಿಧಿಗಳು ರೈತರ ಕಷ್ಟ-ಸುಖಗಳನ್ನು ಎಂದಾದರೂ ಆಲಿಸಿದ್ದಾರೆಯೇ? ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳು, ರಸಗೊಬ್ಬರಗಳನ್ನು ಸಕಾಲಕ್ಕೆ ಪೂರೈಕೆ ಮಾಡಿದ್ದಾರೆಯೇ? ಹೀಗಾದರೆ ರೈತರು ಜೀವನ ಮಾಡುವುದಾದರೂ ಹೇಗೆ? ಆದ್ದರಿಂದ ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನಿಗದಿ ಮಾಡಿ ರೈತರು ನಷ್ಟ ಹೊಂದುವುದನ್ನು ತಪ್ಪಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

9 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

27 mins ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

47 mins ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

2 hours ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

2 hours ago