ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ ಹೋಲಿಸಿದರೆ ಇಂದಿನ ತರಕಾರಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ತಿಂಗಳ ಹಿಂದೆ ಕೆ.ಜಿ.ಗೆ 40 ರೂ.ಗಳಿದ್ದ ಬೆಂಡೆಕಾಯಿ ಈಗ 20 ರೂ.ಗಳಾಗಿದೆ. ಬದನೆಕಾಯಿ 60 ರೂ. ಇದ್ದದ್ದು ಈಗ 40 ರೂ. ಆಗಿದೆ.
ಹಾಗೆಯೇ ಹಸಿ ಮೆಣಸಿನಕಾಯಿ, ಕ್ಯಾರೆಟ್, ಟೊಮೆಟೋ ಬೆಲೆಗಳೂ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿವೆ. ಹೀಗೆ ತರಕಾರಿ ಬೆಳೆಗಳು ದಿನದಿಂದ ದಿನಕ್ಕೆ ಕುಸಿತವಾಗುತ್ತಿರುವುದರಿಂದ ಒಂದು ನಿರ್ದಿಷ್ಟ ಬೆಲೆ ಸಿಗದೆ ರೈತರು ಕಂಗಾಲಾಗುತ್ತಿದ್ದಾರೆ.
ರೈತರು ಅತಿವೃಷ್ಟಿ, ಅನಾವೃಷ್ಟಿಯ ನಡುವೆಯೂ ಕಷ್ಟಪಟ್ಟು ವ್ಯವಸಾಯ ಮಾಡಿ ಬೆಳೆದ ಬೆಳೆಗಳನ್ನು ಮಧ್ಯವರ್ತಿಗಳ ಹಾವಳಿಯ ನಡುವೆಯೂ ಮಾರುಕಟ್ಟೆಗೆ ತಂದು ಮಾರಾಟ ಮಾಡಿರುತ್ತಾರೆ. ಇಷ್ಟಿದ್ದರೂ ರೈತರಿಗೆ ಸರಿಯಾದ ಬೆಲೆ ಸಿಗದೆ ನಷ್ಟ ಹೊಂದುತ್ತಾರೆ ಎಂದರೆ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸುವುದಾದರೂ ಹೇಗೆ? ರೈತರನ್ನು ಈ ದೇಶದ ಬೆನ್ನೆಲುಬು, ಈ ದೇಶದ ಆಸ್ತಿ ಎಂದೆಲ್ಲ ಮಾತನಾಡುವ ಚುನಾಯಿತ ಪ್ರತಿನಿಧಿಗಳು ರೈತರ ಕಷ್ಟ-ಸುಖಗಳನ್ನು ಎಂದಾದರೂ ಆಲಿಸಿದ್ದಾರೆಯೇ? ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳು, ರಸಗೊಬ್ಬರಗಳನ್ನು ಸಕಾಲಕ್ಕೆ ಪೂರೈಕೆ ಮಾಡಿದ್ದಾರೆಯೇ? ಹೀಗಾದರೆ ರೈತರು ಜೀವನ ಮಾಡುವುದಾದರೂ ಹೇಗೆ? ಆದ್ದರಿಂದ ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನಿಗದಿ ಮಾಡಿ ರೈತರು ನಷ್ಟ ಹೊಂದುವುದನ್ನು ತಪ್ಪಿಸಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…