Andolana originals

ಓದುಗರ ಪತ್ರ: ರೈತರ ಬೆಳೆಗಳಿಗೆ ಸರ್ಕಾರವೇ ಬೆಲೆ ನಿಗದಿ ಮಾಡಲಿ

ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ ಹೋಲಿಸಿದರೆ ಇಂದಿನ ತರಕಾರಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ತಿಂಗಳ ಹಿಂದೆ ಕೆ.ಜಿ.ಗೆ 40 ರೂ.ಗಳಿದ್ದ ಬೆಂಡೆಕಾಯಿ ಈಗ 20 ರೂ.ಗಳಾಗಿದೆ. ಬದನೆಕಾಯಿ 60 ರೂ. ಇದ್ದದ್ದು ಈಗ 40 ರೂ. ಆಗಿದೆ.

ಹಾಗೆಯೇ ಹಸಿ ಮೆಣಸಿನಕಾಯಿ, ಕ್ಯಾರೆಟ್, ಟೊಮೆಟೋ ಬೆಲೆಗಳೂ ದೊಡ್ಡ ಮಟ್ಟದಲ್ಲಿ ಕುಸಿತ ಕಂಡಿವೆ. ಹೀಗೆ ತರಕಾರಿ ಬೆಳೆಗಳು ದಿನದಿಂದ ದಿನಕ್ಕೆ ಕುಸಿತವಾಗುತ್ತಿರುವುದರಿಂದ ಒಂದು ನಿರ್ದಿಷ್ಟ ಬೆಲೆ ಸಿಗದೆ ರೈತರು ಕಂಗಾಲಾಗುತ್ತಿದ್ದಾರೆ.

ರೈತರು ಅತಿವೃಷ್ಟಿ, ಅನಾವೃಷ್ಟಿಯ ನಡುವೆಯೂ ಕಷ್ಟಪಟ್ಟು ವ್ಯವಸಾಯ ಮಾಡಿ ಬೆಳೆದ ಬೆಳೆಗಳನ್ನು ಮಧ್ಯವರ್ತಿಗಳ ಹಾವಳಿಯ ನಡುವೆಯೂ ಮಾರುಕಟ್ಟೆಗೆ ತಂದು ಮಾರಾಟ ಮಾಡಿರುತ್ತಾರೆ. ಇಷ್ಟಿದ್ದರೂ ರೈತರಿಗೆ ಸರಿಯಾದ ಬೆಲೆ ಸಿಗದೆ ನಷ್ಟ ಹೊಂದುತ್ತಾರೆ ಎಂದರೆ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸುವುದಾದರೂ ಹೇಗೆ? ರೈತರನ್ನು ಈ ದೇಶದ ಬೆನ್ನೆಲುಬು, ಈ ದೇಶದ ಆಸ್ತಿ ಎಂದೆಲ್ಲ ಮಾತನಾಡುವ ಚುನಾಯಿತ ಪ್ರತಿನಿಧಿಗಳು ರೈತರ ಕಷ್ಟ-ಸುಖಗಳನ್ನು ಎಂದಾದರೂ ಆಲಿಸಿದ್ದಾರೆಯೇ? ರೈತರಿಗೆ ಅಗತ್ಯವಿರುವ ಬಿತ್ತನೆ ಬೀಜಗಳು, ರಸಗೊಬ್ಬರಗಳನ್ನು ಸಕಾಲಕ್ಕೆ ಪೂರೈಕೆ ಮಾಡಿದ್ದಾರೆಯೇ? ಹೀಗಾದರೆ ರೈತರು ಜೀವನ ಮಾಡುವುದಾದರೂ ಹೇಗೆ? ಆದ್ದರಿಂದ ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆಯನ್ನು ನಿಗದಿ ಮಾಡಿ ರೈತರು ನಷ್ಟ ಹೊಂದುವುದನ್ನು ತಪ್ಪಿಸಬೇಕು.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

13 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

13 hours ago