Andolana originals

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ ದೇಣಿಗೆಯಿಂದ ದೇವಾಲಯಗಳ ಜೀರ್ಣೋದ್ಧಾರ, ಹಬ್ಬ, ಜಾತ್ರೆ ಮೊದಲಾದ ಸಂದರ್ಭಗಳಲ್ಲಿ ಅನ್ನದಾನ ಮಾಡುತ್ತಿರುವುದು ಶ್ಲಾಘನೀಯ.

ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣ ಕೇವಲ ಅದ್ಧೂರಿ ಅಲಂಕಾರ ಮತ್ತು ಉತ್ಸವಗಳಿಗೆ ಮಾತ್ರ ಸೀಮಿತವಾಗಬಾರದು. ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆಸರೆಯಾಗಬೇಕು, ಉದಯೋನ್ಮುಖ ಕ್ರೀಡಾಪಟುಗಳಿಗೆ ಬೆಂಬಲ ನೀಡಬೇಕು ಹಾಗೂ ಬಡ ರೋಗಿಗಳ ಚಿಕಿತ್ಸೆಗಾಗಿ ಒಂದು ‘ಆರೋಗ್ಯ ನಿಧಿ’ಯಾಗಿ ರೂಪುಗೊಳ್ಳಬೇಕು. ‘ಜನಸೇವೆಯೇ ಜನಾರ್ಧನನ ಸೇವೆ’ ಎನ್ನುವಂತೆ, ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗುವ ಹಣ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲಿ ಬೆಳಕಾದಾಗ ದೇವರಿಗೂ ಪ್ರೀತಿಯಾಗುತ್ತದೆ. ಈ ನಿಟ್ಟಿನಲ್ಲಿ ಮೈಸೂರು ಭಾಗದ ದೇವಾಲಯಗಳ ಎಲ್ಲಾ ಧರ್ಮದರ್ಶಿಗಳು ಮತ್ತು ಪದಾಧಿಕಾರಿಗಳು ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಬೇಕು.

-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

11 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago