ಓದುಗರ ಪತ್ರ
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ ದೇಣಿಗೆಯಿಂದ ದೇವಾಲಯಗಳ ಜೀರ್ಣೋದ್ಧಾರ, ಹಬ್ಬ, ಜಾತ್ರೆ ಮೊದಲಾದ ಸಂದರ್ಭಗಳಲ್ಲಿ ಅನ್ನದಾನ ಮಾಡುತ್ತಿರುವುದು ಶ್ಲಾಘನೀಯ.
ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಹಣ ಕೇವಲ ಅದ್ಧೂರಿ ಅಲಂಕಾರ ಮತ್ತು ಉತ್ಸವಗಳಿಗೆ ಮಾತ್ರ ಸೀಮಿತವಾಗಬಾರದು. ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆಸರೆಯಾಗಬೇಕು, ಉದಯೋನ್ಮುಖ ಕ್ರೀಡಾಪಟುಗಳಿಗೆ ಬೆಂಬಲ ನೀಡಬೇಕು ಹಾಗೂ ಬಡ ರೋಗಿಗಳ ಚಿಕಿತ್ಸೆಗಾಗಿ ಒಂದು ‘ಆರೋಗ್ಯ ನಿಧಿ’ಯಾಗಿ ರೂಪುಗೊಳ್ಳಬೇಕು. ‘ಜನಸೇವೆಯೇ ಜನಾರ್ಧನನ ಸೇವೆ’ ಎನ್ನುವಂತೆ, ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗುವ ಹಣ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕಿನಲ್ಲಿ ಬೆಳಕಾದಾಗ ದೇವರಿಗೂ ಪ್ರೀತಿಯಾಗುತ್ತದೆ. ಈ ನಿಟ್ಟಿನಲ್ಲಿ ಮೈಸೂರು ಭಾಗದ ದೇವಾಲಯಗಳ ಎಲ್ಲಾ ಧರ್ಮದರ್ಶಿಗಳು ಮತ್ತು ಪದಾಧಿಕಾರಿಗಳು ಇಂತಹ ಸಮಾಜಮುಖಿ ಕಾರ್ಯಗಳ ಮೂಲಕ ಮಾದರಿಯಾಗಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…