ಓದುಗರ ಪತ್ರ
ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಇರಾನಿನ ರಾಜಧಾನಿ ಟೆಹರಾನ್ ಮತ್ತು ಇತರ ನಗರಗಳ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಆತಂಕ ಮೂಡಿಸಿದೆ.
ಇಸ್ರೇಲ್ನ ವೈಮಾನಿಕ ಹಾಗೂ ಡ್ರೋನ್ ದಾಳಿಗಳು ವಿಶೇಷವಾಗಿ ಇರಾನಿನ ಅಣು ಸ್ಥಾವರಗಳು, ರಕ್ಷಣಾ ಸ್ಥಾವರಗಳು ಹಾಗೂ ಇರಾನಿನ ಇಸ್ಲಾಂ ನಾಯಕರ ನಿವಾಸಗಳ ಮೇಲೆ ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ದಶಕಗಳಿಂದಲೂ ಹೊಗೆಯಾಡುತ್ತಿದ್ದ ವೈರತ್ವ ಈಗ ಸೋಟಗೊಂಡಿದ್ದು, ಇಡೀ ವಿಶ್ವದಲ್ಲೇ ತಲ್ಲಣವನ್ನು ಸೃಷ್ಟಿಸಿದೆ. ಇಸ್ರೇಲ್ ಸಣ್ಣ ರಾಷ್ಟ್ರವಾದರೂ ಅತ್ಯಾಧುನಿಕ ಹಾಗೂ ಸುಸಜ್ಜಿತ ಸೇನೆಯನ್ನು ಒಳಗೊಂಡಿದ್ದು, ಪರಮಾಣು ಅಸ್ತ್ರಗಳನ್ನು ಹೊಂದಿದ ಬಲಿಷ್ಠ ರಾಷ್ಟ್ರವಾಗಿದೆ. ಅದೂ ಅಲ್ಲದೆ ಇಡೀ ವಿಶ್ವದಲ್ಲೇ ಗೆರಿಲ್ಲಾ ಯುದ್ಧ ತಂತ್ರಕ್ಕೆ ಹೆಸರು ವಾಸಿಯಾಗಿದೆ. ಇರಾನ್ ಕೂಡ ಬಲಿಷ್ಠ ರಾಷ್ಟ್ರವಾಗಿದ್ದು ಇಸ್ಲಾಂ ರಾಷ್ಟ್ರಗಳ ಬೆಂಬಲವನ್ನು ಪಡೆದುಕೊಂಡಿದೆ. ಯುದ್ಧ ಇನ್ನೂ ತೀವ್ರ ಸ್ವರೂಪ ಪಡೆದುಕೊಂಡು ಪರಮಾಣು ಯುದ್ಧವಾಗಿ ಕೂಡ ಪರಿಣಮಿಸಬಹುದು. ಅನೇಕ ದೇಶಗಳಲ್ಲಿ ತೈಲ ಬೆಲೆ ಒಂದೇ ಸಮನೇ ಏರುತ್ತಿದೆ. ಅನೇಕ ದೇಶಗಳ ಷೇರುಪೇಟೆಗಳು ಕುಸಿಯಲು ಪ್ರಾರಂಭಿಸಿವೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ಯುದ್ಧವನ್ನು ನಿಲ್ಲಿಸುವಂತೆ ಈ ಎರಡೂ ದೇಶಗಳ ಮೇಲೆ ಒತ್ತಡ ಹಾಕುತ್ತಿವೆ. ವಿಶ್ವಸಂಸ್ಥೆ ಕೂಡ ಯುದ್ಧವನ್ನು ಸ್ಥಗಿತಗೊಳಿಸಲು ಶ್ರಮಿಸುತ್ತಿದೆ. ಇರಾನ್ ಮತ್ತು ಇಸ್ರೇಲ್ ಈಗಲಾದರೂ ಯುದ್ಧವನ್ನು ನಿಲ್ಲಿಸಿ, ತಮ್ಮ ತಮ್ಮ ಸಮಸ್ಯೆಗಳನ್ನು ರಾಜತಾಂತ್ರಿಕ ವಿಧಾನಗಳ ಮೂಲಕ ಪರಿಹರಿಸಿಕೊಳ್ಳುವುದು ಅಗತ್ಯವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…
ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…
ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…