ಓದುಗರ ಪತ್ರ
ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಇರಾನಿನ ರಾಜಧಾನಿ ಟೆಹರಾನ್ ಮತ್ತು ಇತರ ನಗರಗಳ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಆತಂಕ ಮೂಡಿಸಿದೆ.
ಇಸ್ರೇಲ್ನ ವೈಮಾನಿಕ ಹಾಗೂ ಡ್ರೋನ್ ದಾಳಿಗಳು ವಿಶೇಷವಾಗಿ ಇರಾನಿನ ಅಣು ಸ್ಥಾವರಗಳು, ರಕ್ಷಣಾ ಸ್ಥಾವರಗಳು ಹಾಗೂ ಇರಾನಿನ ಇಸ್ಲಾಂ ನಾಯಕರ ನಿವಾಸಗಳ ಮೇಲೆ ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ದಶಕಗಳಿಂದಲೂ ಹೊಗೆಯಾಡುತ್ತಿದ್ದ ವೈರತ್ವ ಈಗ ಸೋಟಗೊಂಡಿದ್ದು, ಇಡೀ ವಿಶ್ವದಲ್ಲೇ ತಲ್ಲಣವನ್ನು ಸೃಷ್ಟಿಸಿದೆ. ಇಸ್ರೇಲ್ ಸಣ್ಣ ರಾಷ್ಟ್ರವಾದರೂ ಅತ್ಯಾಧುನಿಕ ಹಾಗೂ ಸುಸಜ್ಜಿತ ಸೇನೆಯನ್ನು ಒಳಗೊಂಡಿದ್ದು, ಪರಮಾಣು ಅಸ್ತ್ರಗಳನ್ನು ಹೊಂದಿದ ಬಲಿಷ್ಠ ರಾಷ್ಟ್ರವಾಗಿದೆ. ಅದೂ ಅಲ್ಲದೆ ಇಡೀ ವಿಶ್ವದಲ್ಲೇ ಗೆರಿಲ್ಲಾ ಯುದ್ಧ ತಂತ್ರಕ್ಕೆ ಹೆಸರು ವಾಸಿಯಾಗಿದೆ. ಇರಾನ್ ಕೂಡ ಬಲಿಷ್ಠ ರಾಷ್ಟ್ರವಾಗಿದ್ದು ಇಸ್ಲಾಂ ರಾಷ್ಟ್ರಗಳ ಬೆಂಬಲವನ್ನು ಪಡೆದುಕೊಂಡಿದೆ. ಯುದ್ಧ ಇನ್ನೂ ತೀವ್ರ ಸ್ವರೂಪ ಪಡೆದುಕೊಂಡು ಪರಮಾಣು ಯುದ್ಧವಾಗಿ ಕೂಡ ಪರಿಣಮಿಸಬಹುದು. ಅನೇಕ ದೇಶಗಳಲ್ಲಿ ತೈಲ ಬೆಲೆ ಒಂದೇ ಸಮನೇ ಏರುತ್ತಿದೆ. ಅನೇಕ ದೇಶಗಳ ಷೇರುಪೇಟೆಗಳು ಕುಸಿಯಲು ಪ್ರಾರಂಭಿಸಿವೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ಯುದ್ಧವನ್ನು ನಿಲ್ಲಿಸುವಂತೆ ಈ ಎರಡೂ ದೇಶಗಳ ಮೇಲೆ ಒತ್ತಡ ಹಾಕುತ್ತಿವೆ. ವಿಶ್ವಸಂಸ್ಥೆ ಕೂಡ ಯುದ್ಧವನ್ನು ಸ್ಥಗಿತಗೊಳಿಸಲು ಶ್ರಮಿಸುತ್ತಿದೆ. ಇರಾನ್ ಮತ್ತು ಇಸ್ರೇಲ್ ಈಗಲಾದರೂ ಯುದ್ಧವನ್ನು ನಿಲ್ಲಿಸಿ, ತಮ್ಮ ತಮ್ಮ ಸಮಸ್ಯೆಗಳನ್ನು ರಾಜತಾಂತ್ರಿಕ ವಿಧಾನಗಳ ಮೂಲಕ ಪರಿಹರಿಸಿಕೊಳ್ಳುವುದು ಅಗತ್ಯವಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…