Andolana originals

ಓದುಗರ ಪತ್ರ:  ಇಸ್ರೇಲ್- ಇರಾನ್ ಯುದ್ಧ ಕೊನೆಗೊಳ್ಳಲಿ

ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಇರಾನಿನ ರಾಜಧಾನಿ ಟೆಹರಾನ್ ಮತ್ತು ಇತರ ನಗರಗಳ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಆತಂಕ ಮೂಡಿಸಿದೆ.

ಇಸ್ರೇಲ್‌ನ ವೈಮಾನಿಕ ಹಾಗೂ ಡ್ರೋನ್ ದಾಳಿಗಳು ವಿಶೇಷವಾಗಿ ಇರಾನಿನ ಅಣು ಸ್ಥಾವರಗಳು, ರಕ್ಷಣಾ ಸ್ಥಾವರಗಳು ಹಾಗೂ ಇರಾನಿನ ಇಸ್ಲಾಂ ನಾಯಕರ ನಿವಾಸಗಳ ಮೇಲೆ ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ದಶಕಗಳಿಂದಲೂ ಹೊಗೆಯಾಡುತ್ತಿದ್ದ ವೈರತ್ವ ಈಗ ಸೋಟಗೊಂಡಿದ್ದು, ಇಡೀ ವಿಶ್ವದಲ್ಲೇ ತಲ್ಲಣವನ್ನು ಸೃಷ್ಟಿಸಿದೆ. ಇಸ್ರೇಲ್ ಸಣ್ಣ ರಾಷ್ಟ್ರವಾದರೂ ಅತ್ಯಾಧುನಿಕ ಹಾಗೂ ಸುಸಜ್ಜಿತ ಸೇನೆಯನ್ನು ಒಳಗೊಂಡಿದ್ದು, ಪರಮಾಣು ಅಸ್ತ್ರಗಳನ್ನು ಹೊಂದಿದ ಬಲಿಷ್ಠ ರಾಷ್ಟ್ರವಾಗಿದೆ. ಅದೂ ಅಲ್ಲದೆ ಇಡೀ ವಿಶ್ವದಲ್ಲೇ ಗೆರಿಲ್ಲಾ ಯುದ್ಧ ತಂತ್ರಕ್ಕೆ ಹೆಸರು ವಾಸಿಯಾಗಿದೆ. ಇರಾನ್ ಕೂಡ ಬಲಿಷ್ಠ ರಾಷ್ಟ್ರವಾಗಿದ್ದು ಇಸ್ಲಾಂ ರಾಷ್ಟ್ರಗಳ ಬೆಂಬಲವನ್ನು ಪಡೆದುಕೊಂಡಿದೆ. ಯುದ್ಧ ಇನ್ನೂ ತೀವ್ರ ಸ್ವರೂಪ ಪಡೆದುಕೊಂಡು ಪರಮಾಣು ಯುದ್ಧವಾಗಿ ಕೂಡ ಪರಿಣಮಿಸಬಹುದು. ಅನೇಕ ದೇಶಗಳಲ್ಲಿ ತೈಲ ಬೆಲೆ ಒಂದೇ ಸಮನೇ ಏರುತ್ತಿದೆ. ಅನೇಕ ದೇಶಗಳ ಷೇರುಪೇಟೆಗಳು ಕುಸಿಯಲು ಪ್ರಾರಂಭಿಸಿವೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ಯುದ್ಧವನ್ನು ನಿಲ್ಲಿಸುವಂತೆ ಈ ಎರಡೂ ದೇಶಗಳ ಮೇಲೆ ಒತ್ತಡ ಹಾಕುತ್ತಿವೆ. ವಿಶ್ವಸಂಸ್ಥೆ ಕೂಡ ಯುದ್ಧವನ್ನು ಸ್ಥಗಿತಗೊಳಿಸಲು ಶ್ರಮಿಸುತ್ತಿದೆ. ಇರಾನ್ ಮತ್ತು ಇಸ್ರೇಲ್ ಈಗಲಾದರೂ ಯುದ್ಧವನ್ನು ನಿಲ್ಲಿಸಿ, ತಮ್ಮ ತಮ್ಮ ಸಮಸ್ಯೆಗಳನ್ನು ರಾಜತಾಂತ್ರಿಕ ವಿಧಾನಗಳ ಮೂಲಕ ಪರಿಹರಿಸಿಕೊಳ್ಳುವುದು ಅಗತ್ಯವಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

2 mins ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

20 mins ago

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

29 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

43 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

1 hour ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

1 hour ago