Andolana originals

ಓದುಗರ ಪತ್ರ:  ಇಸ್ರೇಲ್- ಇರಾನ್ ಯುದ್ಧ ಕೊನೆಗೊಳ್ಳಲಿ

ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಇರಾನಿನ ರಾಜಧಾನಿ ಟೆಹರಾನ್ ಮತ್ತು ಇತರ ನಗರಗಳ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಆತಂಕ ಮೂಡಿಸಿದೆ.

ಇಸ್ರೇಲ್‌ನ ವೈಮಾನಿಕ ಹಾಗೂ ಡ್ರೋನ್ ದಾಳಿಗಳು ವಿಶೇಷವಾಗಿ ಇರಾನಿನ ಅಣು ಸ್ಥಾವರಗಳು, ರಕ್ಷಣಾ ಸ್ಥಾವರಗಳು ಹಾಗೂ ಇರಾನಿನ ಇಸ್ಲಾಂ ನಾಯಕರ ನಿವಾಸಗಳ ಮೇಲೆ ನಡೆಯುತ್ತಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ದಶಕಗಳಿಂದಲೂ ಹೊಗೆಯಾಡುತ್ತಿದ್ದ ವೈರತ್ವ ಈಗ ಸೋಟಗೊಂಡಿದ್ದು, ಇಡೀ ವಿಶ್ವದಲ್ಲೇ ತಲ್ಲಣವನ್ನು ಸೃಷ್ಟಿಸಿದೆ. ಇಸ್ರೇಲ್ ಸಣ್ಣ ರಾಷ್ಟ್ರವಾದರೂ ಅತ್ಯಾಧುನಿಕ ಹಾಗೂ ಸುಸಜ್ಜಿತ ಸೇನೆಯನ್ನು ಒಳಗೊಂಡಿದ್ದು, ಪರಮಾಣು ಅಸ್ತ್ರಗಳನ್ನು ಹೊಂದಿದ ಬಲಿಷ್ಠ ರಾಷ್ಟ್ರವಾಗಿದೆ. ಅದೂ ಅಲ್ಲದೆ ಇಡೀ ವಿಶ್ವದಲ್ಲೇ ಗೆರಿಲ್ಲಾ ಯುದ್ಧ ತಂತ್ರಕ್ಕೆ ಹೆಸರು ವಾಸಿಯಾಗಿದೆ. ಇರಾನ್ ಕೂಡ ಬಲಿಷ್ಠ ರಾಷ್ಟ್ರವಾಗಿದ್ದು ಇಸ್ಲಾಂ ರಾಷ್ಟ್ರಗಳ ಬೆಂಬಲವನ್ನು ಪಡೆದುಕೊಂಡಿದೆ. ಯುದ್ಧ ಇನ್ನೂ ತೀವ್ರ ಸ್ವರೂಪ ಪಡೆದುಕೊಂಡು ಪರಮಾಣು ಯುದ್ಧವಾಗಿ ಕೂಡ ಪರಿಣಮಿಸಬಹುದು. ಅನೇಕ ದೇಶಗಳಲ್ಲಿ ತೈಲ ಬೆಲೆ ಒಂದೇ ಸಮನೇ ಏರುತ್ತಿದೆ. ಅನೇಕ ದೇಶಗಳ ಷೇರುಪೇಟೆಗಳು ಕುಸಿಯಲು ಪ್ರಾರಂಭಿಸಿವೆ. ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ಯುದ್ಧವನ್ನು ನಿಲ್ಲಿಸುವಂತೆ ಈ ಎರಡೂ ದೇಶಗಳ ಮೇಲೆ ಒತ್ತಡ ಹಾಕುತ್ತಿವೆ. ವಿಶ್ವಸಂಸ್ಥೆ ಕೂಡ ಯುದ್ಧವನ್ನು ಸ್ಥಗಿತಗೊಳಿಸಲು ಶ್ರಮಿಸುತ್ತಿದೆ. ಇರಾನ್ ಮತ್ತು ಇಸ್ರೇಲ್ ಈಗಲಾದರೂ ಯುದ್ಧವನ್ನು ನಿಲ್ಲಿಸಿ, ತಮ್ಮ ತಮ್ಮ ಸಮಸ್ಯೆಗಳನ್ನು ರಾಜತಾಂತ್ರಿಕ ವಿಧಾನಗಳ ಮೂಲಕ ಪರಿಹರಿಸಿಕೊಳ್ಳುವುದು ಅಗತ್ಯವಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

1 hour ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

2 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

3 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

4 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

4 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

6 hours ago