Andolana originals

ಓದುಗರ ಪತ್ರ: ಜಯಚಾಮರಾಜ ಒಡೆಯರ್ ವೃತ್ತದ ಹೆಸರು ಉಳಿಯಲಿ

ಮಂಡ್ಯ ಸೀಮೆಯ ಆರ್ಥಿಕ, ಸಾಮಾಜಿಕ, ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಮೈಸೂರು ರಾಜವಂಶಸ್ಥರ ಕೊಡುಗೆ ಅಪಾರ.

ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ ೧೯೩೯ ರಲ್ಲಿ ಮೈಸೂರು ಜಿಲ್ಲೆಯಿಂದ ಪ್ರತ್ಯೇಕವಾಗಿ ಮಂಡ್ಯ ಜಿಲ್ಲಾ ಕೇಂದ್ರವಾಗಿ ರೂಪುಗೊಂಡಿತು.

ಮೈಸೂರು ಸಂಸ್ಥಾನವನ್ನಾಳಿದ ಒಡೆಯರ್ ವಂಶದ ಕೊನೆಯ ಅರಸರಾದ ಜಯಚಾಮರಾಜ ಒಡೆಯರ್ ಅವರು ಮಂಡ್ಯದಲ್ಲಿ ಶಿಕ್ಷಣಕ್ಕಾಗಿ ಕಲ್ಲುಕಟ್ಟಡ, ಸಾರ್ವಜನಿಕರ ಅನುಕೂಲಕ್ಕಾಗಿ ಮಾರುಕಟ್ಟೆ ನಿರ್ಮಾಣ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಮಂಡ್ಯದಲ್ಲಿ ಇರುವ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ನಾಡ ಪ್ರಭು ಕೆಂಪೇಗೌಡ ಪ್ರತಿಮೆ ನಿರ್ಮಿಸುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ. ಅಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ನಿರ್ಮಿ ಸಿದರೆ ಜಯಚಾಮರಾಜ ಒಡೆಯರ್ ಅವರ ಹೆಸರು ಅಳಿಸಿಹೋಗಿ ಕೆಂಪೇಗೌಡ ವೃತ್ತ ಎಂದು ಕರೆಯಲಾಗುತ್ತದೆ. ಆ ರೀತಿಯಾದರೆ ಅದು ಚಾಮರಾಜ ಒಡೆಯರ್ ಅವರಿಗೆ ಅಪಮಾನ ಮಾಡಿದಂತಾಗುತ್ತದೆ. ಜಯಚಾಮ ರಾಜ ಒಡೆಯರ್ ವೃತ್ತದ ಹೆಸರನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಈ ಬಗ್ಗೆ ಶಾಸಕರು ಗಮನಹರಿಸಬೇಕಾಗಿದೆ. ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಸೂಕ್ತ ಮತ್ತು ಪರ್ಯಾಯ ಸ್ಥಳವನ್ನು ಗುರುತಿಸಲಿ.

 – ಸಿ. ಸಿದ್ದರಾಜು ಆಲಕೆರೆ, ಮಂಡ್ಯ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

22 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

23 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

23 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

23 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

23 hours ago