ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎ- ಒಕ್ಕೂಟ ಬಹುಮತ ಗಳಿಸಿದ್ದ ಹಿನ್ನೆಲೆಯಲ್ಲಿ ತಿರುವನಂತಪುರಂನಲ್ಲಿರುವ ಕೇರಳ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಗೆ ಆಗಮಿಸಿದ್ದ ಕೊಲ್ಲಂ ಕ್ಷೇತ್ರದ ನೂತನ ಶಾಸಕಿ ಬಿಂದು ಕೃಷ್ಣ ಅವರನ್ನು ಹಿರಿಯ ಕಾಂಗ್ರೆಸ್ ಮುಖಂಡ ಚೆರಿಯನ್ ಫಿಲಿಪ್ ಬಲವಂತವಾಗಿ ಆಲಂಗಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಡಿಯೋ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಖಂಡನೆಯೂ ವ್ಯಕ್ತವಾಗಿದೆ. ಜನಪ್ರತಿನಿಧಿಗಳಾದವರು ಸಭ್ಯತೆಯಿಂದ ವರ್ತಿಸಬೇಕು. ತಾವೇ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದರೆ ಸಮಾಜಕ್ಕೆ ಯಾವ ಸಂದೇಶ ನೀಡಲಾಗುತ್ತದೆ ಎಂಬ ಪ್ರಶ್ನೆ ಕಾಡುತ್ತದೆ. ಅನುಚಿತವಾಗಿ ವರ್ತಿಸುವ ಜನ ಪ್ರತಿನಿಽಗಳ ವಿರುದ್ಧ ಪಕ್ಷದ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳುವ ಮೂಲಕ ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸುವುದು ಅಗತ್ಯ.
– ಚಿರಂತನ್, ಮೈಸೂರು





