Andolana originals

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ಜೈಲುಪಾಲು, ಅಕ್ರಮ ಬೆಟ್ಟಿಂಗ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮೂಲದ ಶಾಸಕನ ಬಂಧನ ಹಾಗೂ ಲಂಚಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದ ಶಾಸಕ ಲೋಕಾಯುಕ್ತ ಪೊಲೀಸರ ವಶಕ್ಕೆ.. ಈ ರೀತಿಯ ಹತ್ತು ಹಲವು ಸುದ್ದಿಗಳನ್ನು ಮಾಧ್ಯಮಗಳಲ್ಲಿ ನೋಡಿದಾಗ ಅವರನ್ನು ಜನಪ್ರತಿನಿಧಿಗಳನ್ನಾಗಿ ಆಯ್ಕೆ ಮಾಡಿದ ಮತದಾರರ ಮನಸ್ಸಿಗೆ ಬೇಸರವಾಗುತ್ತದೆ.

ಶಾಸಕರು ಜನಪ್ರತಿನಿಧಿಗಳು. ವಿಧಾನಸಭೆಯಲ್ಲಿ ಅವರು ಶಾಸನ ರಚನೆ ಮಾಡಬೇಕಾದ ಜವಾಬ್ದಾರಿ ಹೊಂದಿರುತ್ತಾರೆ. ಆದರೆ ಕೆಲ ಶಾಸಕರು ತಮ್ಮ ಜವಾಬ್ದಾರಿ ಮರೆತು ಕಾನೂನು ಉಲ್ಲಂಘನೆ ಮಾಡಿ ಜೈಲು ಪಾಲಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ತಮ್ಮ ಕ್ಷೇತ್ರದ ಜನರ ಧ್ವನಿಯಾಗಿ ಮತದಾರರ ಕುಂದುಕೊರತೆಗಳನ್ನು ಆಲಿಸಿ ಸರ್ಕಾರದಿಂದ ಪರಿಹಾರ ಒದಗಿಸಬೇಕಾದ ಜನಪ್ರತಿನಿಧಿಗಳೇ ಈ ರೀತಿ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಪಾಲಾಗುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುತ್ತಿರುವ ಅಪಮಾನ.

ಶಾಸಕರು ಆರೋಪಿಗಳಾಗುವುದು ದೊಡ್ಡ ಕಳಂಕ. ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬ ಶಾಸಕರೂ ತಾನು ಹೊಂದಿರುವ ಸ್ಥಾನದ ಮಹತ್ವವನ್ನು ಅರಿತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯುವ ಅವಶ್ಯಕತೆ ಇದೆ. ಅದೇ ರೀತಿ ಪ್ರತಿಯೊಬ್ಬ ಮತದಾರನೂ ಸದೃಢವಾದ ದೇಶ ಕಟ್ಟಲು ಹಾಗೂ ಭ್ರಷ್ಟಾಚಾರ ಮುಕ್ತ ಸಮಾಜವನ್ನು ನಿರ್ಮಿಸಲು ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸುವ ಅವಶ್ಯಕತೆಯಿದೆ.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

5 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

8 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

8 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

8 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

8 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

8 hours ago